ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಡಾ.ಕೆ.ಅರುಣ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಕಲಬುರಗಿಯಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಪ್ರಾಚಾರ್ಯರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ದಾವಣಗೆರೆ ಜಿಲ್ಲೆಗೆ ಪೊಲೀಸ್ ಅಧೀಕ್ಷಕರ ಸ್ಥಾನಕ್ಕೆ ಯಾವ ಅಧಿಕಾರಿಯನ್ನು ಸರ್ಕಾರ ನೇಮಕ ಮಾಡಿಲ್ಲ.