ಬೆಂಗಳೂರು: ಕೆರೆ ಅಭಿವೃದ್ಧಿ ಮತ್ತು ಬಲವರ್ಧನೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರ 100 ಕೋಟಿ ರೂ. ವಿಪತ್ತು ಉಪಶಮನ ನಿಧಿಯಿಂದ ಬಿಡುಗಡೆ ಮಾಡಿ ಆದೇಶಿಸಿದೆ.
ಮುಂಬರುವ ತಿಂಗಳುಗಳಲ್ಲಿ ಮಳೆ ನೀರು ಬಳಸಿಕೊಳ್ಳಲು ಸಣ್ಣ ನೀರಾವರಿ ಇಲಾಖೆಗೆ ಸೇರಿದ 93 ಕೆರೆಗಳ ಅಭಿವೃದ್ಧಿ ಮತ್ತು ಬಲವರ್ಧನೆ ಕಾಮಗಾರಿ ಕೈಗೊಳ್ಳಲು ಈ ಹಣ ಬಿಡುಗಡೆ ಮಾಡಲಾಗಿದೆ.
2023ನೇ ಸಾಲಿನ ಜೂನ್ 1 ರಿಂದ ಸೆಪ್ಟೆಂಬರ್ 30ರ ವರೆಗೆ ಒಟ್ಟಾರೆ ರಾಜ್ಯದಲ್ಲಿ ವಾಡಿಕೆ ಮಳೆ 852 ಮಿ.ಮಿ. ಆಗಿದ್ದು, ಈ ಅವಧಿಯಲ್ಲಿ 642 ಮಿ.ಮಿ.ಮಳೆ ಮಾತ್ರ ಆಗಿತ್ತು. ರಾಜ್ಯದಲ್ಲಿ 2023 ರ ಮುಂಗಾರು ಋತುವಿನಲ್ಲಿ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ.
ಇದರಿಂದಾಗಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ತೀರಾ ಕೆಳಮಟ್ಟ ತಲುಪಿತ್ತಲ್ಲದೆ, ಅಂತರ್ಜಲ ಕುಸಿದಿತ್ತು. ಪರಿಣಾಮವಾಗಿ ರಾಜ್ಯದಲ್ಲಿ ನೀರಿನ ಅಭಾವ ಪರಿಸ್ಥಿತಿ ತಲೆದೋರಿತ್ತು. ಆದ್ದರಿಂದ ರಾಜ್ಯದ ಬರ ಉಪಶಮನಕ್ಕಾಗಿ ಕೆರೆಗಳ ಅಭಿವೃದ್ಧಿ ಅತ್ಯಂತ ಅವಶ್ಯ ಎಂದು ಮನಗಂಡ ರಾಜ್ಯ ಸರ್ಕಾರ 93 ಕೆರೆಗಳ ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಅಭಿವೃದ್ಧಿಗೊಳಿಸುವ ಕೆರೆಗಳ ವಿವರಗಳನ್ನು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸಹ ವಿವರಗಳೊಂದಿಗೆ ಮಂಡಿಸುವಂತೆಯೂ ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + twelve =
Remember me
