ಬೆಂಗಳೂರು:ತೆಲಂಗಾಣ ಮಾದರಿಯಲ್ಲಿ ಬೆಂಗಳೂರು ನಗರದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 150 ಅಡಿ ಎತ್ತರದ ಬೃಹತ್ ಪ್ರತಿಮೆ ನಿರ್ಮಿಸಬೇಕು ಎಂದು ಆನೇಕಲ್ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘ ಒತ್ತಾಯಿಸಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅವರು ಅಸ್ಪೃಶ್ಯತೆ, ಅಸಮಾನತೆ, ಅನ್ಯಾಯ, ಕಂದಾಚಾರ, ಮೌಢ್ಯ, ದೌರ್ಜನ್ಯ, ದಬ್ಬಾಳಿಕೆಗಳಿಂದ ತುಂಬಿ ತುಳುಕುತ್ತಿದ್ದ ಸಮಾಜಕ್ಕೆ ಸಮಾನತೆಯ ಸಂವಿಧಾನವನ್ನು ರಚಿಸಿ ಕೊಡುವ ಮೂಲಕ ಭಾರತದ ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ದಿದ್ದಾರೆ. ಈ ನಿಟ್ಟಿನಲ್ಲಿ ಡಾ. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಿಸಲು ಸರ್ಕಾರ ಸೂಕ್ತ ಜಾಗ ಗುರುತಿಸಿ ತಕ್ಷಣವೇ ಕಾರ್ಯ ಪ್ರವೃತ್ತರಾಗಬೇಕು ಎಂದು ಸಂಘದ ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಎಂ ಕೃಷ್ಣಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಅಗಾಧವಾದ ಸಾಧನೆಯನ್ನು ಗುರುತಿಸಿ ತೆಲಂಗಾಣದಲ್ಲಿ 120 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಇದು ಭಾರತೀಯರೆಲ್ಲರು ಹೆಮ್ಮೆ ಪಡುವ ವಿಚಾರ. ಬೆಂಗಳೂರಿನಲ್ಲಿ ಇನ್ನೂ ಎತ್ತರದ ಪ್ರತಿಮೆ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ರಾಜ್ಯಾಧ್ಯಕ್ಷೆ ಬೊಮ್ಮಸಂದ್ರ ರೇಣುಕಾ, ರಾಜ್ಯ ಉಪಾಧ್ಯಕ್ಷ ಮಣಿಗಾನಹಳ್ಳಿ ವಿ ಶ್ರೀನಿವಾಸ, ರಾಜ್ಯ ಪ್ರಧಾನ ಕಾರ್ಯದರ್ಶಿ, ಉದಯಕವಿ ರಾಜ್ಯ ಕಾರ್ಯಾಧ್ಯಕ್ಷರುಗಳಾದ ರವಿಚಂದ್ರ ಎಸ್, ಮೀಸೆ ರಾಮಣ್ಣ, ರಾಜ್ಯ ಮಹಿಳಾ ಗೌ. ಅಧ್ಯಕ್ಷೆ ಸಿ. ಮೀನಾಕ್ಷಿ ಹಾಗೂ ಕನ್ನಡಾಂಬೆ ಸಿಂಹ ಘರ್ಜನೆ ರಾಜ್ಯಾದ್ಯಕ್ಷ ಪಿ ಮಂಜುನಾಥ್, ಬಿಜೆಪಿ ಮುಖಂಡ ಕೊಪ್ಪ ಮುನಿರಾಜಣ್ಣ, ಟಿಪಿ ಮಾಜಿ ಸದಸ್ಯ ಶೇಕ್ ರಿಜ್ವಾನ್ ಭಾಗವಹಿಸಿದ್ದರು
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + 11 =
Remember me
