ಬೆಂಗಳೂರು:ಶ್ರೀ ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ 2019-20ನೇ ಹಣಕಾಸು ಸಾಲಿನಲ್ಲಿ 159.30 ಲಕ್ಷ ರೂ.ಗಳ ನಿವ್ವಳ ಲಾಭಗಳಿಸಿದೆ.
ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ದ್ವಾರಕನಾಥ್ ಮಾತನಾಡಿ, 2020ರ ಮಾರ್ಚ್ ಅಂತ್ಯಕ್ಕೆ ಷೇರು ಬಂಡವಾಳದೊಂದಿಗೆ 4459.65 ಲಕ್ಷ ರೂ. ಗಳ ಸ್ವಂತ ನಿಧಿಯನ್ನು ಕ್ರೋಡಿಕರಿಸಿದೆ. 72,417.26 ಲಕ್ಷ ರೂ.ನಷ್ಟು ದುಡಿಯುವ ಬಂಡವಾಳದೊಂದಿಗೆ ಪ್ರಗತಿಯತ್ತ ಸಾಗಿದೆ ಎಂದರು.
ವಿಶ್ವದಾದ್ಯಂತ ಕರೊನಾದಿಂದ ತೀವ್ರ ಸಂಕಷ್ಟ ಎದುರಾಗಿದ್ದು, ಆರ್ಥಿಕ ಕ್ಷೇತ್ರದಲ್ಲಿ ಭಾರಿ ಪರಿಣಾಮ ಬೀರಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಬ್ಯಾಂಕ್ ನಿವ್ವಳ ಲಾಭ ಗಳಿಸಿರುವುದು ಸಂತಷವಾಗಿದೆ. ಬ್ಯಾಂಕು ತನ್ನ 10 ಶಾಖೆಗಳಲ್ಲಿ ಷೇರು ಬಂಡವಾಳ, ಠೇವಣಿ ಸಂಗ್ರಹ, ಸದಸ್ಯರಿಗೆ ಸಮಗ್ರ ಸಾಲ ವಿತರಣೆ ಮತ್ತು ಹೂಡಿಕೆಗಳ ನಿರ್ವಹಣೆ ಸೇರಿದಂತೆ ಭಾರತೀಯ ರಿಸರ್ವ್ ಬ್ಯಾಂಕ್‌ನ(ಆರ್‌ಬಿಐ) ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ.
ಬ್ಯಾಂಕಿನ ಸಾಧನೆಗೆ ಕಾರಣರಾಗಿರುವ ಗ್ರಾಹಕರು, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳು ಸಲ್ಲಿಸುತ್ತೇನೆ ಎಂದು ದ್ವಾರಕನಾಥ್ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
