ಬೆಂಗಳೂರು:ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ ಸಲ್ಲಿಸಿದ್ದ 109 ನಾಮಪತ್ರಗಳು ತಿರಸ್ಕೃತಗೊಂಡಿವೆ.
ಶನಿವಾರ ನಾಮಪತ್ರ ಪರಿಶೀಲನೆ ನಡೆದಿದ್ದು, 14 ಕ್ಷೇತ್ರಗಳಲ್ಲಿ ಒಟ್ಟು 330 ಅಭ್ಯರ್ಥಿಗಳು 503 ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 394 ನಾಮಪತ್ರ ಪುರಸ್ಕೃತಗೊಂಡಿದ್ದು, 109 ನಾಮಪತ್ರ ತಿರಸ್ಕೃತಗೊಂಡಿವೆ. ಒಟ್ಟು 272 ಅಭ್ಯರ್ಥಿಗಳ ನಾಮಪತ್ರ ಮಾನ್ಯವಾಗಿವೆ.
2ನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಸುರಪುರ ವಿಧಾನಸಭೆ ಉಪ ಚುನಾವಣೆಗೆ ಸಲ್ಲಿಕೆಯಾದ 7 ಅಭ್ಯರ್ಥಿಗಳ 13 ನಾಮಪತ್ರಗಳು ಪುರಸ್ಕೃತವಾಗಿವೆ. ಈ ಕ್ಷೇತ್ರದಿಂದ ಸಲ್ಲಿಕೆಯಾದ ಯಾವುದೇ ನಾಮಪತ್ರ ತಿರಸ್ಕೃತವಾಗಿಲ್ಲ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + 11 =
Remember me
