ಬಾಗಲಕೋಟೆ:ನದಿಯೊಂದರಲ್ಲಿ ನಡೆದ ಅವಘಡದಲ್ಲಿ ಅಪ್ಪ-ಮಗಳ ಸಹಿತ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ. ಆ ಪೈಕಿ ಇಬ್ಬರ ಶವ ಪತ್ತೆಯಾಗಿದ್ದು, ಇನ್ನೊಬ್ಬರ ಮೃತದೇಹಕ್ಕಾಗಿ ಹುಡುಕಾಟ ಮುಂದುವರಿದಿದೆ.
ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಕೊಟೇಕಲ್ ಗ್ರಾಮದವರಾದ ಶ್ರೀದೇವಿ ಮಾವಿನಮರದ (32), ವಿಶ್ವನಾಥ ಮಾವಿನಮರದ (40) ಮತ್ತು ನಂದಿನಿ ಮಾವಿನಮರದ (12) ಮೃತಪಟ್ಟವರು.
ಗದಗ ಜಿಲ್ಲೆಯ ರೋಣದಲ್ಲಿ ವಾಸವಾಗಿದ್ದ ಇವರು ಕುಟುಂಬದ ಒಟ್ಟು ಆರು ಜನರೊಂದಿಗೆ ಬಾದಾಮಿಯ ಬನಶಂಕರಿ ದೇವಿಯ ದರ್ಶನಕ್ಕೆ ಆಗಮಿಸಿದ್ದರು. ದೇವಿ ದರ್ಶನ ಪಡೆದ ಬಳಿ ಬಾದಾಮಿಯ ಶಿವಯೋಗ ಮಂದಿರಕ್ಕೆ ಭೇಟಿ ನೀಡಿದ್ದರು. ನಂತರ ಊಟ ಸೇವಿಸಲು ಶಿವಯೋಗಮಂದಿರದ ಬಳಿ ಮಲಪ್ರಭಾ ನದಿ ದಡದಲ್ಲಿ ಕುಳಿತಿದ್ದರು. ಊಟದ ಬಳಿಕ ಶ್ರೀದೇವಿ ಮಾವಿನಮರದ ಅವರು ನದಿಯಲ್ಲಿ ಕೈ ತೊಳೆಯಲು ಹೋಗಿ ಕಾಲು ಜಾರಿ ಆಯತಪ್ಪಿ ನೀರಿಗೆ ಬಿದ್ದಿದ್ದರು.
ಇದನ್ನೂ ಓದಿ:ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..
ಅತ್ತಿಗೆಯನ್ನು ರಕ್ಷಿಸಲು ಮೈದುನ ವಿಶ್ವನಾಥ ಹಾಗೂ ಅವರ ಪುತ್ರಿ ನಂದಿನಿ ಇಬ್ಬರೂ ನೀರಿಗೆ ಇಳಿದಿದ್ದರು. ಆದರೆ ನೀರಿನಲ್ಲಿ ಮೂವರು ಕೊಚ್ಚಿಹೋಗಿದ್ದರು. ಅದನ್ನು ಗಮನಿಸಿದ ಗ್ರಾಮಸ್ಥರು ರಕ್ಷಣೆಗೆ ಧಾವಿಸಿದ್ದು, ಶ್ರೀದೇವಿ ಹಾಗೂ ವಿಶ್ವನಾಥ ಇಬ್ಬರ ಶವಗಳನ್ನೂ ನೀರಿನಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೂ ಪತ್ತೆಯಾಗದ ನಂದಿನಿಗಾಗಿ ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..

‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್​ಮೇಲ್​ ಮಾಡಿದ ಅಪರಿಚಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 19 =
Remember me
