
ಬೆಂಗಳೂರು:ದಾವಣಗೆರೆಯಲ್ಲಿ ನಡೆಯಲಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿಂದು ಅನಾವರಣಗೊಳಿಸಿ, ಶುಭ ಹಾರೈಸಿದರು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಪ್ರತಿ ವರ್ಷ ಆಯೋಜಿಸುವ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎನ್ನುವ ಸ್ವಾಗತ ಸಮಿತಿ ಮನವಿಗೆ ಪ್ರತಿಸ್ಪಂಧಿಸಿದ ಮುಖ್ಯಮಂತ್ರಿಗಳು, ಸಮ್ಮೇಳನಕ್ಕೆ ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ ನೀಡಿದರು.ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನೇತೃತ್ವದಲ್ಲಿ ನೀವೆಲ್ಲರೂ ಬಂದಿದ್ದೀರಿ. ಶೀಘ್ರವೇ ದಿನಾಂಕ ಕೊಟ್ಟು, ಉದ್ಘಾಟನೆಗೂ ಬರುತ್ತೇನೆ ಎಂದು ಹೇಳಿದರು.ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ, ಪ್ರಧಾನ ಕಾರ್ಯದರ್ಶಿ ಎ.ಫಕೃದ್ಧೀನ, ರಾಜ್ಯ ಸಮಿತಿಯ ದೇವರಾಜ್, ಕೆ.ಚಂದ್ರಣ್ಣ, ಪದಾಧಿಕಾರಿಗಳಾದ ಒಡೆಯರ, ಬದರಿನಾಥ, ತಿಪ್ಪೇಸ್ವಾಮಿ, ಪ್ರಕಾಶ, ನಿಂಗೋಜಿರಾವ್, ವೀರೇಶ, ಮಂಜುನಾಥ ಪಿ.ಕಾಡಜ್ಜಿ, ಕೃಷ್ಣೋಜಿರಾವ್, ವೇದಮೂರ್ತಿ, ಗುರುಮೂರ್ತಿ,ಚಂದ್ರಶೇಖರ್, ಕೆ.ಜೈಮುನಿ ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven + fourteen =
Remember me
