ತುಮಕೂರು:ಈ ಗ್ರಾಮದಲ್ಲಿ ಒಂದೇ ದಿನ ನಾಲ್ವರು ಮಕ್ಕಳು ಕಣ್ಮರೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಮಂಜುಳಾ (13), ಮಧು ಕುಮಾರ್ (13), ಮಹಾಲಕ್ಷ್ಮಿ (15) ಹಾಗೂ ಭಾನು (14) ಎಂಬ ಹೆಸರಿನ ಮಕ್ಕಳು ಕಣ್ಮರೆಯಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಚಿಕ್ಕಬಾಣಗೆರೆ ಗ್ರಾಮದ ಮಲ್ಲಿಕಾರ್ಜುನ ಅವರ ಮಕ್ಕಳಾದ ಮಂಜುಳಾ ಹಾಗೂ ಮಧುಕುಮಾರ್, ಹಾಗೂ ಅದೇ ಗ್ರಾಮದ ಕೃಷ್ಣಪ್ಪನ ಮಕ್ಕಳಾದ ಮಹಾಲಕ್ಷ್ಮಿ ಹಾಗೂ ಭಾನು ಶನಿವಾರ ಮಧ್ಯಾಹ್ನ ಮನೆಯಿಂದ ಹೋದವರು ಕಣ್ಮರೆಯಾಗಿದ್ದಾರೆ.
ಸಂಬಂಧಿಕರ ಮನೆ, ಅಲ್ಲಿ ಇಲ್ಲಿ ಎಂದು ಎಲ್ಲಾ ಕಡೆ ಹುಡುಕಿದ ಪೋಷಕರು ಹೈರಾಣಾಗಿದ್ದಾರೆ. ಪೋಷಕರಲ್ಲಿ ಆತಂಕ ಹೆಚ್ಚಾಗಿದ್ದು ತಮ್ಮ ಮಕ್ಕಳನ್ನ ಹುಡುಕಿಕೊಂಡುವಂತೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಟ್ಟನಾಯಕನಹಳ್ಳಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 12 =
Remember me
