ಬೆಂಗಳೂರು:ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಹೈಕೋಟ್ ಎತ್ತಿ ಹಿಡಿದಿದೆ.
2022ರ ಜು.26ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. 4 ವರ್ಷದ ನಮ್ಮ ಪುತ್ರಿ ಪ್ರಸಕ್ತ ವರ್ಷದಲ್ಲಿ ಎಲ್​ಕೆಜಿ ಕಲಿಯಲು ಅನುಮತಿಸಬೇಕು ಎಂದು ಕೋರಿ ಬೆಂಗಳೂರಿನ ಅನಿಕೇತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ. ಮಾರ್ಗಸೂಚಿ ಹಿಂದೆ ಮೇಲ್ನೋಟಕ್ಕೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ ಎಂದು ನ್ಯಾಯಾಲಯಕ್ಕೆ ಅರ್ಥವಾಗಿದೆ. ಹೀಗಾಗಿ, ಒಬ್ಬ ವಿದ್ಯಾರ್ಥಿ/ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ಆದೇಶದಲ್ಲಿ ತಿಳಿಸಿದೆ.
ರಾಷ್ಟ್ರೋತ್ಥಾನ ವಿದ್ಯಾಕೇಂದ್ರವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್​ಇಪಿ) 2020 ಅಳವಡಿಸಿಕೊಂಡಿದ್ದು, ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ಮತ್ತು ಗರಿಷ್ಠ ಅರ್ಹತಾ ಮಾನದಂಡವನ್ನು ಸರಿಯಾಗಿ ಮಾರ್ಪಾಡು ಮಾಡಿದೆ. ವಿದ್ಯಾಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಪ್ರವೇಶಾತಿ ಮಾರ್ಗಸೂಚಿಗಳು ಸಿಂಧುವಾಗಿದ್ದು, ಎನ್​ಇಪಿಗೆ ಅನುಗುಣವಾಗಿವೆ ಎಂದು ನ್ಯಾಯಾಲಯ ಆದೇಶದಲ್ಲಿ ದಾಖಲಿಸಿದೆ.
ಹಸ್ತಕ್ಷೇಪ ಮಾಡಲಾಗದು:ರಾಷ್ಟ್ರೋತ್ಥಾನ ವಿದ್ಯಾಕೇಂದ್ರವನ್ನು ಶಿಕ್ಷಣ ಇಲಾಖೆ ಮೂಲಕ ಕೇಂದ್ರ ಸರ್ಕಾರ ನಡೆಸುತ್ತಿದೆ. ಹೀಗಾಗಿ, ವಿದ್ಯಾಕೇಂದ್ರವು ಎನ್​ಇಪಿ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ. ಜಾಗತಿಕ ಶೈಕ್ಷಣಿಕ ಮಾರ್ಗಸೂಚಿಗಳನ್ನು ಆಧರಿಸಿ ಪ್ರವೇಶಾತಿ ವಯಸ್ಸನ್ನು ಎನ್​ಇಪಿ ಮಾನದಂಡಗಳಲ್ಲಿ ಸೇರಿಸಲಾಗಿದೆ. ಮಕ್ಕಳಿಗೆ ಸರಿಯಾದ ಆರೈಕೆ ಮತ್ತು ಶಿಕ್ಷಣ ನೀಡಬೇಕು. ಆಟ ಕೇಂದ್ರಿತ, ಚಟುವಟಿಕೆ ಕೇಂದ್ರಿತ, ಹೊಂದಿಕೊಳ್ಳುವ ಕಲಿಕೆಯ ಭರವಸೆಯ ಹಿನ್ನೆಲೆಯಲ್ಲಿ ತಜ್ಞರು ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದಾರೆ. ಮಕ್ಕಳು ಪ್ರೌಢ ಶಿಕ್ಷಣ ಪಡೆಯುವಾಗ ಅವರಲ್ಲಿ ಪರೀಕ್ಷಾ ಸಂಬಂಧಿ ಒತ್ತಡ ಮತ್ತು ಭಯವನ್ನು ಹೋಗಲಾಡಿಸುವ ಉದ್ದೇಶದಿಂದ ಸಮಗ್ರ ನೀತಿ ರೂಪಿಸಲಾಗಿದೆ ಎಂದು ತಜ್ಞರು ಹೇಳಿರುವಾಗ ಸಕ್ಷಮ ಪ್ರಾಧಿಕಾರ ರೂಪಿಸಿರುವ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.
ಅರ್ಜಿದಾರರ ಪರವಾಗಿ ವಾದಿಸಿದ್ದ ವಕೀಲ ಕೆ.ಎನ್ ಶ್ರೀನಿವಾಸ, 2020ರ ಮೇ 11ರ ಅಧಿಸೂಚನೆಯ ಪ್ರಕಾರ 1ನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ 5.5 ವರ್ಷ ಆಗಿರಬೇಕು. ಎಲ್​ಕೆಜಿಗೆ ಸೇರಿಸಲು 3.5 ವರ್ಷ ಆಗಿರಬೇಕು ಎಂದು ಹೇಳಲಾಗಿದೆ. ಈ ಅಧಿಸೂಚನೆಯು ತಮಗೆ ಅನ್ವಯವಾಗುತ್ತದೆಯೇ ವಿನಃ ಆಕ್ಷೇಪಾರ್ಹವಾದ ಅಧಿಸೂಚನೆ ಅನ್ವಯಿಸುವುದಿಲ್ಲ ಎಂದು ವಾದಿಸಿದ್ದರು. ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಂ ಹುಯಿಲಗೋಳ, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ 2009ರ ನಿಬಂಧನೆಗಳು ಮತ್ತು ಎನ್​ಇಪಿಯನ್ನು ಗಮನದಲ್ಲಿಟ್ಟುಕೊಂಡು 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯಸ್ಸು ಮಿತಿ ನಿಗದಿಪಡಿಸಲಾಗಿದೆ ಎಂದು ಸಮರ್ಥಿಸಿದ್ದರು.
ಡಾ.ರಾಜ್ ಕುಟುಂಬದಲ್ಲಿ ಒಬ್ಬರ ಹಿಂದೊಬ್ಬರ ಸಾವು; ಕಾರಣ ತಿಳಿಯಲು ಸದ್ಯದಲ್ಲೇ ಅಷ್ಟಮಂಗಲ ಪ್ರಶ್ನೆ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − 11 =
Remember me
