ಹುಬ್ಬಳ್ಳಿ:ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಮಗು ಬಲಿಯಾಗಿದೆ ಎಂದು ಆರೋಪಿಸಿ ಮಗುವಿನ ಪಾಲಕರು, ಕುಟುಂಬಸ್ಥರು ಕಿಮ್ಸ್​ನಲ್ಲಿ ಪ್ರತಿಭಟನೆ ನಡೆಸಿದರು.
ತಾಜ್ ನಗರದ 2 ವರ್ಷದ ರಕ್ಷಾ ಚೌಧರಿ ಮೃತ ದುರ್ದೈವಿ. ಮಗುವಿನ ಬಾಯಿಯೊಳಗೆ ಸಣ್ಣ ಗಡ್ಡೆಯಾಗಿತ್ತು. ಚಿಕಿತ್ಸೆಗೆಂದು ಪಾಲಕರು ಮಗುವನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದರು. ಪಾಲಕರ ಅನುಮತಿ ಪಡೆಯದೇ ವೈದ್ಯರು ಆಪರೇಷನ್ ಮಾಡಿದ್ದಾರೆ. ಅಪರೇಷನ್ ಬಳಿಕ ತೀವ್ರ ರಕ್ತಸ್ರಾವವಾಗಿತ್ತು. ರಕ್ತಸ್ರಾವ ನಿಲ್ಲದ ಹಿನ್ನೆಲೆ‌, ಖಾಗಗಿ ಆಸ್ಪತ್ರೆಗೆ ಕಳುಹಿಸಿದ್ದರು. ಅಲ್ಲಿಯೂ ರಕ್ತಸ್ರಾವ ನಿಲ್ಲದ ಹಿನ್ನೆಲೆ‌ ವಾಪಸ್ ಕಿಮ್ಸ್​ಗೆ ಕಳುಹಿಸಿದ್ದರು. ಕಿಮ್ಸ್​ಗೆ ವಾಪಸ್ ಬಂದ ಮೇಲೆ ಮಗು ಸಾವನ್ನಪ್ಪಿದೆ ಎಂದು ಪಾಲಕರು ಆರೋಪಿಸುತ್ತಾ ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ಅಡ್ಮಿಟ್ ಆಗುವಾಗ ಚೆನ್ನಾಗಿದ್ದ ಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ. ಮೃತಪಟ್ಟ ಬಳಿಕ ನಿನ್ನೆ ದಿನಾಂಕ ಹಾಕಿ‌ ಸಹಿ‌ ಪಡೆದಿದ್ದಾರೆ ಎಂದು ಪಾಲಕರು ಆಕ್ರೋಶ ಹೊರಹಾಕಿದ್ದಾರೆ. ವೈದ್ಯರ ನಿರ್ಲಕ್ಷ್ಯ ಆಗಿಲ್ಲ. ಸರಿಯಾದ ಚಿಕಿತ್ಸೆ ನೀಡಲಾಗಿದೆ‌ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಸ್ಪಷ್ಟಪಡಿಸಿದ್ದಾರೆ.
ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ಥೂ ಇದೆಂಥಾ ಅಸಹ್ಯ? ಅಣ್ಣ-ತಂಗಿ ನಡುವೆಯೇ ಅಕ್ರಮ ಸಂಬಂಧ, ಅಡ್ಡಿಬಂದ ತಾಯಿಯನ್ನೇ ಕೊಂದ ಕಾಮುಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
