ಶಿವಮೊಗ್ಗ:ಬಜರಂಗ ದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎನ್‌ಐಎ(ರಾಷ್ಟ್ರೀಯ ತನಿಖಾ ದಳ) ಗುರುವಾರ ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿತು.
ಎನ್‌ಐಎ ಇನ್‌ಸ್ಪೆಕ್ಟರ್ ಷಣ್ಮುಗಂ ನೇತೃತ್ವದಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಒಟ್ಟು 90 ಅಧಿಕಾರಿಗಳು 8 ತಂಡಗಳಾಗಿ ಗುರುವಾರ ಬೆಳಗ್ಗೆಯಿಂದ ತನಿಖೆ ಕೈಗೊಂಡರು. ಹರ್ಷನ ಕೊಲೆ ನಡೆದ ಸ್ಥಳ, ಆತನ ನಿವಾಸ, ಆತ ಓಡಾಡುತ್ತಿದ್ದ ಸ್ಥಳ, ಆರೋಪಿಗಳು ಬಾಯ್ಬಿಟ್ಟಿರುವ ಸ್ಥಳ, ಹತ್ಯೆಗೆ ಸ್ಕೆಚ್ ರೂಪಿಸಿದ್ದ ಸ್ಥಳ, ಆರೋಪಿಗಳು ಶೆಲ್ಟರ್ ಪಡೆದ ಸ್ಥಳ ಹಾಗೂ ಘಟನೆಯ ಪೂರ್ವಾಪರದ ಸ್ಥಳ ಸೇರಿ 18 ಕಡೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.
ಎರಡು ತಿಂಗಳ ಹಿಂದೆಯೂ ಶಿವಮೊಗ್ಗಕ್ಕೆ ಎನ್​ಐಎ ಅಧಿಕಾರಿಗಳು ಬಂದಿದ್ದರು. ಇದೀಗ ಮತ್ತೊಮ್ಮೆ ಆಗಮಿಸಿದ್ದಾರೆ. ಕರ್ನಾಟಕದ ಅಧಿಕಾರಿಗಳಿಗೆ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಜತೆಗೆ ಸ್ಥಳೀಯ ಪೊಲೀಸರ ಸಹಕಾರ ಪಡೆದಿರುವ ಅಧಿಕಾರಿಗಳು ಮಹತ್ವದ ಅಂಶಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ.
ತನಿಖೆ ಬಗ್ಗೆ ಹೆಚ್ಚಿದ ಕುತೂಹಲ:ಫೆ.20ರಂದು ಹರ್ಷನ ಕೊಲೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿದ್ದು, ಈಗಾಗಲೇ ಎರಡು ಬಾರಿ ಎನ್​ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಬಂದು ಹೋಗಿದ್ದರು. ಇದೀಗ 3ನೇ ಬಾರಿ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.
ಗದ್ದೆ ಉಳುಮೆ ಮಾಡುತ್ತಿರುವಾಗಲೇ ಹೃದಯಾಘಾತ: ಗದ್ದೆಯಲ್ಲೇ ಟ್ರ್ಯಾಕ್ಟರ್​ ಚಾಲಕ ಸಾವು

ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eleven =
Remember me
