ರಾಯಚೂರು:ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದೆ. ಈ ಪೈಕಿ ಬೆಂಗಳೂರಿನ ಗುಪ್ತಚರ ವಿಭಾಗದ ಸಿಪಿಐ ಉದಯರವಿ ಅವರ ಸಬಂಧಿಕರ ಮನೆಗಳ ಮೇಲೂ ದಾಳಿಯಾಗಿದೆ.
ಉದಯರವಿ ಮೂಲತಃ ರಾಯಚೂರು ಜಿಲ್ಲೆಯ ಆಶಿಹಾಳ ತಾಂಡಾದವರು. ರಾಯಚೂರು ಜಿಲ್ಲೆಯ ಮುದಗಲ್​ನಲ್ಲಿ ಉದಯರವಿ ಅವರ ಅತ್ತೆ ಗಿರಿಜಮ್ಮ ಹಾಗೂ ಗುರುಗಳಾದ ಡಾ.ಅಯ್ಯಪ್ಪ ಮನೆ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು, ಮಹತ್ವದ ದಾಖಲೆಗಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಕನಕಗಿರಿ ವಿಧಾನಸಭೆ ಕ್ಷೇತ್ರದಿಂದ ಮುಂದಿನ ಬಾರಿ ಚುನಾವಣೆಗೆ ನಿಲ್ಲಲು ಉದಯರವಿ ಸಿದ್ಧತೆಯಲ್ಲಿದ್ದರು.
ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳ ವಿವರಗಳು ಈ ಕೆಳಗಿನಂತಿವೆ1. ಭೀಮಾರಾವ್ ವೈ. ಪವಾರ್ (ಸೂಪರಿಂಟೆಂಡೆಂಟ್ ಆಫ್ ಇಂಜಿನಿಯರ್, ಬೆಳಗಾವಿ)2. ಹರೀಶ್ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ಉಡುಪಿ)3. ರಾಮಕೃಷ್ಣ ಎಚ್.ವಿ. (ಎಇಇ, ಸಣ್ಣ ನೀರಾವರಿ, ಹಾಸನ)4.ರಾಜೀವ್ ಪುರಸಯ್ಯ ನಾಯಕ್ (ಸಹಾಯಕ ಇಂಜಿನಿಯರ್, ಪಿಡಬ್ಲ್ಯುಡಿ ಇಲಾಖೆ, ಕಾರವಾರ)5. ಬಿ.ಆರ್. ಬೋಪಯ್ಯ (ಜೂನಿಯರ್ ಇಂಜಿನಿಯರ್, ಪೊನ್ನಂಪೇಟೆ ಜಿಲ್ಲಾ ಪಂಚಾಯತ್)6. ಮಧುಸೂಧನ್ (ಜಿಲ್ಲಾ ನೋಂದಣಾಧಿಕಾರಿ, IGR ಕಚೇರಿ, ಬೆಳಗಾವಿ)7. ಪರಮೇಶ್ವರಪ್ಪ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ, ಹೂವಿನಹಡಗಲಿ)8. ಯೆಲ್ಲಪ್ಪ ಎನ್. ಪಡಸಾಲಿ (RTO, ಬಾಗಲಕೋಟೆ)9. ಶಂಕರಪ್ಪ ನಾಗಪ್ಪ ಗೋಗಿ ( ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ)10. ಪ್ರದೀಪ್ ಎಸ್. ಆಲೂರ್ ( ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ, RDPR, ಗದಗ)11. ಸಿದ್ದಪ್ಪ ಟಿ. (ಉಪ ಮುಖ್ಯ ವಿದ್ಯುತ್ ಅಧಿಕಾರಿ, ಬೆಂಗಳೂರು)12. ತಿಪ್ಪಣ್ಣ ಪಿ. ಸಿರಸಗಿ (ಜಿಲ್ಲಾ ಕಾರ್ಯಕ್ರಮಾಧಿಕಾರಿ ಬೀದರ್)13. ಮೃತುಂಜಯ ಚೆನ್ನಬಸಯ್ಯ ತಿರಾಣಿ ( ಸಹಾಯಕ ಕಂಟ್ರೋಲರ್, ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್)14. ಮೋಹನ್ ಕುಮಾರ್ (ಕಾರ್ಯನಿರ್ವಾಹಕ ಇಂಜಿನಿಯರ್, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ)15. ಶ್ರೀಧರ್ (ಜಿಲ್ಲಾ ನೋಂದಣಾಧಿಕಾರಿ, ಕಾರವಾರ)16. ಮಂಜುನಾಥ್ ಜಿ (ನಿವೃತ್ತ ಇಇ. PWD)17. ಶಿವಲಿಂಗಯ್ಯ (ಸಿ ಗ್ರೂಪ್​, ಬಿಡಿಎ)18. ಉದಯರವಿ (ಪೊಲೀಸ್ ಇನ್ಸ್‌ಪೆಕ್ಟರ್, ಕೊಪ್ಪಳ)19. ಬಿ.ಜಿ.ತಿಮ್ಮಯ್ಯ (ಕೇಸ್ ವರ್ಕರ್, ಕಡೂರು ಪುರಸಭೆ)20. ಚಂದ್ರಪ್ಪ ಸಿ. ಹೋಳೇಕರ್ (UTP ಕಚೇರಿ, ರಾಣೆಬೆನ್ನೂರು)21. ಜನಾರ್ದನ್ (ನಿವೃತ್ತ ರಿಜಿಸ್ಟ್ರಾರ್ ಮೌಲ್ಯಮಾಪನಗಳು (ಭೂಮಿ), ಬೆಂಗಳೂರು)
ಡಾ.ಶಂಕರೇಗೌಡರಿಗೆ ಓಪನ್ ಹಾರ್ಟ್ ಸರ್ಜರಿ: ಮಂಡ್ಯದ 5 ರೂಪಾಯಿ ವೈದ್ಯರ ಚೇತರಿಕೆಗೆ ಪ್ರಾರ್ಥನೆ

ಜ್ಯೋತಿಷಿ ಮಾತು ಕೇಳಿ ಕೆಟ್ಟ ಪ್ರೇಮಿಗಳು: ಮದ್ವೆಗೆ ಒಪ್ಪಿಗೆ ಸಿಕ್ಕರೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಪೇದೆ-ಅರಣ್ಯ ಅಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − one =
Remember me
