ಮಧುಗಿರಿ:ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ತಾಯಿ, ಹಿರಿಯ ನಟ ಶಕ್ತಿಪ್ರಸಾದ್ ಅವರ ಪತ್ನಿ ಲಕ್ಷ್ಮೀ ದೇವಮ್ಮ (85) ಶನಿವಾರ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು 10 ದಿನಗಳ ಹಿಂದೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ವಿಧಿವಶವಾದರು.
ಇಂದು ಸಂಜೆ ಸ್ವಗ್ರಾಮ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಲಕ್ಷ್ಮೀದೇವಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಬೆಂಗಳೂರಿನ ನಿವಾಸದಲ್ಲಿ ಕೆಲಕಾಲ ಅಂತಿಮ ದರ್ಶನಕ್ಕೆ ‌ವ್ಯವಸ್ಥೆ ಮಾಡಲಾಗಿದೆ.

ತುಮಕೂರು ಜಿಲ್ಲಾ ಪರಿಷತ್ ಮಾಜಿ ಸದಸ್ಯರಾಗಿದ್ದ ಲಕ್ಷ್ಮೀದೇವಮ್ಮ ಅವರು ಜಕ್ಕೇನಹಳ್ಳಿಯ ಅಹೋಬಲಪತಿ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಅಧ್ಯಕ್ಷೆಯಾಗಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ್ದರು.
ಲಕ್ಷ್ಮೀದೇವಮ್ಮ ಅವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಮತ್ತು ಅಮ್ಮಾಜಿ ಸೇರಿ ಮೂವರು ಮಕ್ಕಳು. ಕಿಶೋರ್ ಸರ್ಜಾ ಈಗಾಗಲೇ ಮೃತರಾಗಿದ್ದಾರೆ. ನಟರಾದ ಚಿರಂಜೀವಿ ಸರ್ಜಾ ಮತ್ತು ಧ್ರುವ ಸರ್ಜಾ, ಸೂರಜ್ ಸರ್ಜಾ ಅವರು ಮೊಮ್ಮಕ್ಕಳು. ಚಿರಂಜೀವಿ ಸರ್ಜಾ ಅವರ ಅಗಲಿಕೆಯಿಂದ ಲಕ್ಷ್ಮೀದೇವಮ್ಮ ಬಹಳ ನೊಂದಿದ್ದರು.
ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಆಟವಾಡುತ್ತಲೇ ಅಪ್ಪನ ವಾಹನಕ್ಕೆ ಬಲಿಯಾದ ಕಂದಮ್ಮ! ವಾಹನ ರಿವರ್ಸ್​ ತೆಗೆದುಕೊಳ್ಳುವಾಗ ದುರಂತ

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಅಡ್ಡ ಬಂದ ನಾಯಿ: ಬೈಕ್​ ಸವಾರರಿಬ್ಬರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 16 =
Remember me
