ಬೆಂಗಳೂರು:ರಾಜಕಾರಣದಲ್ಲಿ ವಯಸ್ಸು ಮುಖ್ಯವಲ್ಲ. ಜನರ ಕೆಲಸ ಮಾಡಲು ಉತ್ಸಾಹ ಮುಖ್ಯ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮಾರ್ಮಿಕವಾಗಿ ಹೇಳಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿದ ದೇವೇಗೌಡ, ನಾವು ಮಹಾಭಾರತದಲ್ಲಿನ ಘಟನೆ ನೆನಪಿಸಿಕೊಳ್ಳಬೇಕು. ಭೀಷ್ಮನಿಗೆ ವಯಸ್ಸು ಆದ್ರೂ ಹತ್ತು ದಿನ ಯುದ್ಧ ಮಾಡಿದ. ಕರ್ಣ ಒಂದೂವರೆ ದಿನ ಯುದ್ಧ ಮಾಡಿದ. ರಾಜಕಾರಣಕ್ಕೆ ವಯಸ್ಸು ಮುಖ್ಯ ಅಲ್ಲ, ಜನರ ಕೆಲಸ ಮಾಡಲು ಉತ್ಸಾಹ ಮುಖ್ಯ ಎಂದರು. ವಯಸ್ಸು ಇದೆ ಎಂದು ಮನೆಯಲ್ಲಿ ಮಲಗಿಕೊಂಡ್ರೆ ಪ್ರಯೋಜನವೇನು? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯನನ್ನು ನನ್ನ ಶಿಷ್ಯ ಎಂದು ಹೇಳಲ್ಲ. ಅವರು ನಾಯಕರಾಗಿ ಬೆಳೆದಿದ್ದಾರೆ ಎಂದ ದೇವೇಗೌಡ, ನೀರಿನ ವಿಚಾರದಲ್ಲಿ ಜೆಡಿಎಸ್ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ. ಈ ವಿಚಾರದಲ್ಲಿ ಭೇದಭಾವ ಇಲ್ಲ ಎಂದರು.

ಸಂಸತ್​ ಗೌರವ ಇತ್ತಿಚೆಗೆ ಕಡಿಮೆ ಆಗ್ತಿದೆ. ಕೂಗಾಡಿ ಸದನ ಮುಂದೂಡುವುದು ಸರಿಯಲ್ಲ. ಅಲ್ಲಿ ನಾನು ಯಾರಿಗೂ ಬುದ್ಧಿ ಹೇಳುವ ಸ್ಥಾನದಲ್ಲಿ ಇಲ್ಲ. ವ್ಯವಸ್ಥೆ ಹಾಳಾಗಿದೆ. ಎರಡೂ ಕಡೆ ದೋಷವಿದೆ. ಹಠ ಬಿಡಬೇಕು, ಕೂತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸಂಸತ್ ನಡೆಯದಂತೆ ಮಾಡುವುದು ಸರಿಯಲ್ಲ ಎಂದರು.
2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ನಂದಿಬೆಟ್ಟದ ತಪ್ಪಲಲ್ಲಿ ಇದೆಂಥಾ ವರ್ತನೆ? ಹೇಳೋರಿಲ್ಲ ಕೇಳೋರಿಲ್ಲ… ವಿಡಿಯೋ ವೈರಲ್​

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
