ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರ ರಾಜಕೀಯ ಬುಡ ಅಲ್ಲಾಡಿಸಲು ಬಿಜೆಪಿ ಭಾರಿ ರಣತಂತ್ರ ರೂಪಿಸಿದೆ. ಡಿಕೆಶಿಯ ಬದ್ಧವೈರಿಗಳಾದ ಅಶ್ವಥ್ ನಾರಾಯಣ, ಸಿ.ಪಿ.ಯೋಗೇಶ್ವರ್ ಮತ್ತು ರಮೇಶ್ ಜಾರಕಿಹೊಳಿ ಅವರು ಡಿಕೆಶಿ ಮಣಿಸಲು ತ್ರಿಶೂಲವ್ಯೂಹ ರಚನೆ ಮಾಡಿದ್ದಾರೆ.
ಸರ್ಕಾರ ಇರುವ ಸಂದರ್ಭದಲ್ಲಿ ಹಲವು ಬಿಜೆಪಿ ನಾಯಕರಿಗೆ ಖೆಡ್ಡಾ ತೋಡಲು ಸಿದ್ಧತೆ ನಡೆಸಿದ್ದ ಡಿಕೆಶಿಗೆ, ಇದೀಗ ಅವರ ಬದ್ಧವೈರಿಗಳು ‘ವಿಶ್ವನಾಥ್’ ಎಂಬ ಅಸ್ತ್ರವನ್ನ ಹೂಡುತ್ತಿದ್ದಾರೆ. ಈ ಹಿಂದೆ ಚುನಾವಣೆಯಲ್ಲಿ ಡಿಕೆಶಿ ವಿರುದ್ಧ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಸೋಲು ಕಂಡಿದ್ದ ಅಭ್ಯರ್ಥಿ ವಿಶ್ವನಾಥ್​ ಅವರನ್ನ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಸಲು ಸಿದ್ಧತೆ ನಡೆಯುತ್ತಿದೆ.
2004ರಲ್ಲಿ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದ ವಿಶ್ವನಾಥ್​, 2008ರ ಚುನಾಚಣೆಯಲ್ಲಿ ಡಿಕೆಶಿಗೆ ಜೆಡಿಎಸ್​ ಅಭ್ಯರ್ಥಿಯಾಗಿ ಎದುರಾಳಿಯಾಗಿದ್ದರು. ಡಿಕೆಶಿಗೆ ಪ್ರಬಲ ಫೈಟ್ ಕೊಟ್ಟಿದ್ದ ವಿಶ್ವನಾಥ್, ಕೇವಲ 7179 ಮತಗಳಿಂದ ಸೋಲುಂಡಿದ್ದರು. 2013ರಲ್ಲಿ ಮತ್ತೆ ಸ್ಪರ್ಧೆ ಮಾಡಿದ್ದ ವಿಶ್ವನಾಥ್​, ಡಿಕೆಶಿಯನ್ನು ಎದುರಿಸಲು ಆಗದೆ ಚುನಾವಣೆಯಿಂದ ದೂರ ಉಳಿದಿದ್ದರು. ಅಲ್ಲದೆ ದಳಪತಿಗಳಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಇವರನ್ನು ಬಿಜೆಪಿಗೆ ಕರೆತಂದು ಡಿಕೆಶಿ ವಿರುದ್ಧ ಚುನಾವಣಾ ಕಣಕ್ಕಿಳಿಸಲು ಅಶ್ವಥ್ ನಾರಾಯಣ, ಸಿ.ಪಿ.ಯೋಗೇಶ್ವರ್, ರಮೇಶ್ ಜಾರಕಿಹೊಳಿ ಕಸರತ್ತು ನಡೆಸುತ್ತಿದ್ದಾರೆ.
ಇನ್ನು ಸಿಡಿ ಕೇಸ್​ನಲ್ಲಿ ಡಿಕೆಶಿ ಪಾತ್ರವಿದೆ ಎಂದು ಗರಂ ಆಗಿದ್ದ ರಮೇಶ್​ ಜಾರಕಿಹೊಳಿ, ಕನಕಪುರದಲ್ಲೇ ಡಿಕೆಶಿಯನ್ನು ಸೋಲಿಸುವೆ. ಆ ಮೂಲಕ ನಾನು ಏನೆಂದು ತೋರಿಸುವೆ ಎಂದೆ ರಮೇಶ್​ ಜಾರಕಿಹೊಳಿ ಅಂದು ತೊಡೆತಟ್ಟಿದ್ದರು.
ಪರಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್​! ಆಟ-ಪಾಠದ ನೆಪದಲ್ಲಿ ಮಕ್ಕಳನ್ನೂ ಬಿಟ್ಟಿಲ್ಲ

ದೇವೇಗೌಡರ ಬಗ್ಗೆ ನಾಲಗೆ ಹರಿಯಬಿಟ್ಟ ರಾಜಣ್ಣ ವಿರುದ್ಧ ಆಕ್ರೋಶ: ಮಧುಗಿರಿ, ಕುಣಿಗಲ್​ ಸೇರಿ ಹಲವೆಡೆ ಬೃಹತ್​ ಪ್ರತಿಭಟನೆ

ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 4 =
Remember me
