ಬಳ್ಳಾರಿ:ಕೊಳಗಲ್ ಗ್ರಾಮದ ಬಳಿ ಎಚ್‌ಎಲ್‌ಸಿ ಕಾಲುವೆಗೆ ಆಟೋ ಪಲ್ಟಿಯಾಗಿದ್ದು, ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ನೀರಿನಲ್ಲಿ ಕೊಚ್ಚಿ ಹೋಗಿರುವ ಇನ್ನೂ ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ.

ನಿಂಗಮ್ಮ, ದುರ್ಗಮ್ಮ, ಪುಷ್ಪಾವತಿ ಮೃತ ದುರ್ದೈವಿಗಳು. ಲಕ್ಷ್ಮೀ, ನಾಗರತ್ನ, ಹುಲಿಗೆಮ್ಮ ಎಂಬುವವರು ನೀರಿನಲ್ಲಿ ಕೊಚ್ಚಿಹೋಗಿದ್ದು, ಗ್ರಾಮಾಂತರ ಠಾಣೆ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಹಗ್ಗದಿಂದ ಆಟೋ ಎಳೆಯಲು ಪ್ರಯತ್ನಿಸಿದರೂ ಹಗ್ಗ ತುಂಡಾದ ಪರಿಣಾಮ ಆಟೋ ಕೊಚ್ಚಿಕೊಂಡು ಹೋಗಿದೆ.

ಒಟ್ಟು ಡ್ರೈವರ್​ ಸೇರಿ 11 ಮಂದಿ ಕೊಳಗಲ್ ಗ್ರಾಮದಿಂದ ಜಮೀನಿನ ಕೆಲಸಕ್ಕೆಂದು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಆಟೋ ಎಚ್ಎಲ್​ಸಿ ಕಾಲುವೆ ಪಕ್ಕದಲ್ಲೇ ಹೋಗುತ್ತಿದ್ದ ಆಟೋಗೆ ಮಾರ್ಗಮಧ್ಯೆ ರಸ್ತೆಯಲ್ಲಿ ಕಲ್ಲು ತಾಗಿ ಆಟೋ ಸ್ಕಿಡ್ ಆಗಿ ಪಕ್ಕದ ನಾಲೆಗೆ ಬಿದ್ದಿದೆ. ಪ್ರಯಾಣಿಕರ ಚೀರಾಟ ಕೇಳಿ ನಾಲೆ ಬಳಿಗೆ ಬಂದ ಸ್ಥಳೀಯರು ಮೂವರು ಮಹಿಳೆಯರು ಸೇರಿ ಐವರನ್ನು ರಕ್ಷಿಸಿದ್ದಾರೆ. ಉಳಿದವರ ಪೈಕಿ ಮೂವರು ಮೃತಪಟ್ಟಿದ್ದು ಶವಗಳನ್ನು ಹೊರ ತೆಗೆಯಲಾಗಿದೆ. ಇನ್ನೂ ಮೂವರು ಮಹಿಳೆಯರು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಬಳ್ಳಾರಿ ಎಸ್ಪಿ ಸೈದುಲ್ ಅದಾವತ್ ವಿವರಿಸಿದ್ದಾರೆ.
ಮೈಸೂರು ಅರಮನೆಯಲ್ಲಿ ಮರಿಗೆ ಜನ್ಮ ನೀಡಿದ ಲಕ್ಷ್ಮೀ ಆನೆ! ಆನೆ ಗರ್ಭಿಣಿ ಎಂಬುದು ನಮ್ಗೆ ಗೊತ್ತೇ ಇರಲಿಲ್ಲ… ಎಂದ ಅಧಿಕಾರಿಗಳು

ರೋಗಿಯ ಜೀವ ಉಳಿಸಲು ಬೆಂಗಳೂರಿನ ಟ್ರಾಫಿಕ್​ನಲ್ಲಿ 3 ಕಿ.ಮೀ. ಓಡಿದ ಡಾಕ್ಟರ್​! ವಿಡಿಯೋ ವೈರಲ್​, ಎಲ್ಲೆಡೆ ಮೆಚ್ಚುಗೆ

ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಹಚ್ಚಿದ ಗಂಡ… ಚೀರಾಡುತ್ತಾ ಗಂಡನನ್ನೇ ಬಿಗಿದಪ್ಪಿಕೊಂಡ ಪತ್ನಿ! ಮೈಸೂರಲ್ಲಿ ಭೀಕರ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + nineteen =
Remember me
