ಚಾಮರಾಜನಗರ:ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದಕ್ಕೆ ಮನನೊಂದ ಬಿಎಸ್​ವೈ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇಂತಹ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ರವಿ (35) ಮೃತ ದುರ್ದೈವಿ. ರವಿ ಹೋಟೆಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದ ರವಿ, ನಿನ್ನೆ ಸಿಎಂ ಸ್ಥಾನಕ್ಕೆ ಬಿಎಸ್​ವೈ ರಾಜೀನಾಮೆ ಕೊಡುತ್ತಿದ್ದಂತೆ ಮಂಕಾಗಿದ್ದ. ರಾಜೀನಾಮೆ ಘೋಷಣೆಯ ವಿಡಿಯೋವನ್ನು ಪದೇಪದೆ ನೋಡಿದ ರವಿ, ಯಡಿಯೂರಪ್ಪ ಅವರು ಕಣ್ಣೀರು ಸುರಿಸಿದ್ದು ಬೇಸರ ತಂದಿದೆ ಎಂದು ಗ್ರಾಮದ‌ ಗುರುಸ್ವಾಮಿ ಬಳಿ ಹೇಳಿಕೊಂಡಿದ್ದ. ರಾತ್ರಿವರೆಗೂ ಇದೇ ಬೇಸರದಲ್ಲಿದ್ದ. ಬೆಳಗ್ಗೆ ಅವನ ಕ್ಯಾಂಟೀನ್ ಬಳಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಬಿ.ಎಸ್.ಯಡಿಯೂರಪ್ಪ ಮೇಲೆ‌ ರವಿ ಇಟ್ಟಿದ್ದ ಅಭಿಮಾನ‌ ಕಂಡು ಊರಿನ‌ ಜನ ಅವನನ್ನು ರಾಜಾಹುಲಿ ಎಂದೇ ಕರೆಯುತ್ತಿದ್ದರು. 2017ರಲ್ಲಿ ನಡೆದ ಉಪಚುನಾವಣೆಗೆ ಹಾಲಿ ಶಾಸಕ ನಿರಂಜನ್ ಕುಮಾರ್ ಪರ ಬಿ.ಎಸ್.ಯಡಿಯೂರಪ್ಪ ಪ್ರಚಾರ ಮಾಡಲು ಗುಂಡ್ಲುಪೇಟೆಗೆ ಆಗಮಿಸಿದ್ದರು.‌ ಈ ವೇಳೆ ಅವರ ಜತೆಗೆ ರವಿ ಊರುಕೇರಿಗಳನ್ನು ಸುತ್ತಿದ್ದ. ಮಾತು ಮಾತಿಗೂ ಯಡಿಯೂರಪ್ಪ ಜಪ‌ಮಾಡುತ್ತಿದ್ದ. ಸಿಎಂ ಸ್ಥಾನಕ್ಕೆ ರಾಜೀನಾಮೆ ‌ನೀಡಿದಾಗ ಯಡಿಯೂರಪ್ಪ ಸುರಿದ ಕಣ್ಣೀರನ್ನು ಕಂಡು ಮನನೊಂದು‌ ಆತ್ಮಹತ್ಯೆ ‌ಮಾಡಿಕೊಂಡಿದ್ದಾನೆ.
VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಯಡಿಯೂರಪ್ಪ! ಕೊನೇ ಕ್ಷಣದಲ್ಲಿ ಅಧಿಕೃತ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 10 =
Remember me
