ಚಾಮರಾಜನಗರ:ಈ ಬಾರಿ ವಾರಾಂತ್ಯದಲ್ಲಿ ಎಲ್ಲರೂ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ರಜೆಯೂ ಇದ್ದ ಕಾರಣ ಬಹುತೇಕರು ವಿವಿಧೆಡೆ ಪ್ರವಾಸಿ ತಾಣಗಳಿಗೆ ತೆರಳಿ ಸಂಭ್ರಮಿಸಿದ್ದಾರೆ. ಅಂತೆಯೇ ಹೊಸ ವರ್ಷವನ್ನು ಸಂಭ್ರಮಿಸಲೆಂದು ಹೊರ ರಾಜ್ಯಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಬೆಂಗಳೂರಿಗೆ ಬಂದಿದ್ದಾರೆ.
ಇದೀಗ ಹೊಸ ವರ್ಷಾಚರಣೆಗೆ ಕೇರಳದಿಂದ ಬಂದಿದ್ದ ಏಳು ಮಂದಿ ಯುವಕರು, ಬಂಡೀಪುರ, ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ. ಹೊನ್ನೇಗೌಡನಹಳ್ಳಿ ಗೋಪಾಲಪುರ ರಸ್ತೆಯಲ್ಲಿ ಹರಡಿದ್ದ ಹುರುಳಿ ಸೊಪ್ಪು ಕಾರಿನಡಿ ಸಿಲುಕಿಕೊಂಡಿದೆ. ಇದು ಇಂಜಿನ್​​ಗೆ ತಗುಲಿದ ಕಾರಣ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಏಳು ಜನರೂ ತಪ್ಪಿಸಿಕೊಂಡು ಕಾರಿನಿಂದ ಹೊರ ಬಂದಿದ್ದಾರೆ. ಇದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಮಧ್ಯೆದಲ್ಲೇ ಧಗದಗನೆ ಹೊತ್ತಿ ಉರಿದ ಪರಿಣಾಮ ಕಾರು ಸಂಪೂರ್ಣವಾಗಿ ಭಸ್ಮವಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಇದರಿಂದ ಹೆಚ್ಚಿನ ಅವಘಡ ತಡೆದಿದ್ದಾರೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
