ಗದಗ: ಹರ್ತಿ ಗ್ರಾಮದ ಹಳಿ ಇಂದು(ಬುಧವಾರ) ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಗ್ರಾಮಸ್ಥರು ಜಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಇವರೆಲ್ಲರೂ ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆಂದು ಕಾರಿನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಓರ್ವ ಮಹಿಳೆ ಸೇರಿ ಮೂವರು ದುರಂತ ಅಂತ್ಯಕಂಡಿದ್ದಾರೆ.
ಮೃತದೇಹಗಳು ರಸ್ತೆ ಬದಿಯ ಜಮೀನಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದ ಭೀಕರತೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗದಗ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಹೆಲ್ಮೆಟ್ ಧರಿಸದ ಬೈಕ್​ ಸವಾರನಿಗೆ ದಂಡ ಹಾಕಿದ ಎಸ್​ಐಗೆ ನಡುರಸ್ತೆಯಲ್ಲೇ ಎಸಿ, ತಹಸೀಲ್ದಾರ್ ಅವಾಜ್​! ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − five =
Remember me
