ಹಾವೇರಿ:ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಶಿಕ್ಷಕ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ರಾಣೇಬೆನ್ನೂರು ನಗರದ ನಿವಾಸಿ, ಶಿಕ್ಷಕ ಜಯಪ್ರಕಾಶ್​(48) ಹಾಗೂ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಶಾಲಿನಿ(8) ಮತ್ತು ಯಶೋದಾ(8) ಮೃತ ದುರ್ದೈವಿಗಳು. ಜಯಪ್ರಕಾಶ್​ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಮಕ್ಕಳಾದ ಶಾಲಿನಿ ಮತ್ತು ಯಶೋದಾ ಇಬ್ಬರೂ ಸುತ್ತಕೋಟಿ ಗ್ರಾಮದ ರಸ್ತೆಬದಿಯ ಜಮೀನೊಂದರಲ್ಲಿ ಆಟವಾಡುತ್ತಾ ಕೂತಿದ್ದರು. ಜವರಾಯನಂತೆ ಬಂದ ಕಾರು, ಏನೂ ಅರಿಯದ ಮಕ್ಕಳ ಮೇಲೆ ಹರಿದು ಪ್ರಾಣ ತೆಗೆದಿದೆ. ಕಾರಿನಲ್ಲಿದ್ದ ಶಿಕ್ಷಕರೂ ದುರಂತ ಅಂತ್ಯ ಕಂಡಿದ್ದಾರೆ.
ಸುತ್ತಕೋಟಿ ಗ್ರಾಮದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಜಮೀನಿನತ್ತ ನುಗ್ಗಿದೆ, ಅಲ್ಲೇ ಆಟವಾಡುತ್ತಿದ್ದ ಮಕ್ಕಳ ಮೇಲೆ ಹರಿದು, ಮರಕ್ಕೆ ಹೋಗಿ ಡಿಕ್ಕಿ ಹೊಡೆದಿದೆ. ಮರಕ್ಕೆ ಕಾರು ಡಿಕ್ಕಿಯಾದ ರಭಸಕ್ಕೆ ಗಂಭೀರ ಗಾಯಗೊಂಡ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟರು. ಅತ್ತ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ನರಳಾಡುತ್ತಿದ್ದ ಮಕ್ಕಳನ್ನು ಗ್ರಾಮಸ್ಥರು ತಕ್ಷಣ ಹಿರೇಕೆರೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದರಾದರೂ ಮಕ್ಕಳು ಬದುಕಲಿಲ್ಲ.
ಸ್ಥಳಕ್ಕೆ ಭೇಟಿ ನೀಡಿದ ಹಂಸಭಾವಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗ್ಗೆ ಎದ್ದ ಕೂಡಲೇ ತಮ್ಮ ಪಾಡಿಗೆ ಆಟವಾಡಿಕೊಂಡಿದ್ದ ಮಕ್ಕಳ ಸಾವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್​ ಆದೇಶ: ರೈತನಿಗೆ ಪರಿಹಾರ ಕೊಡದೆ ಸತಾಯಿಸುತ್ತಿದ್ದ ಡಿಸಿಗೆ ಶಾಕ್

ಸೂರಿಲ್ಲದೆ ಅಂಬೇಡ್ಕರ್​ ಭವನದಲ್ಲಿ ತಂಗಿದ್ದೇ ತಪ್ಪಾ? ಬಡ ವೃದ್ಧೆಯ ಪ್ರಾಣ ತೆಗೆದ ಗ್ರಾಪಂ ಸದಸ್ಯನ ಮಗ! ಮೈಸೂರಲ್ಲಿ ಅಮಾನವೀಯ ಘಟನೆ

ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

ಲೋಕ ರಕ್ಷಿಸುವ ಮಾಯೆ ನಾನು, ನಿಮ್ಮನ್ನು ಕಾಪಾಡುವೆ… ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + three =
Remember me
