ತುಮಕೂರು:ಕುಣಿಗಲ್ ಪಟ್ಟಣದ ಬೇಗೂರು ಬ್ರಿಡ್ಜ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇನೋವಾ ಕಾರು ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ.
ಶನಿವಾರ ಬೆಳಗ್ಗೆ ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಇನೋವಾ ಕಾರು ತೆರಳುತ್ತಿತ್ತು. ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತ್ತಿತ್ತು. ಮಾರ್ಗಮಧ್ಯೆ ಬೇಗೂರು ಬ್ರಿಡ್ಜ್​ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಡಿವೈಡರ್ ದಾಟಿ ಟಿಟಿ ವಾವನಕ್ಕೆ ಡಿಕ್ಕಿಯಾಗಿದೆ.
ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪಕ್ಕದಲ್ಲಿ ಸಾಗುತ್ತಿದ್ದ ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರು ಮೂಲದ ಸುನೀಲ್ ಮೃತ ದುರ್ದೈವಿ. ಮತ್ತೊಬ್ಬನ ಮೃತನ ಹೆಸರು ಇನ್ನೂ ಗೊತ್ತಾಗಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

ಜನಾಕ್ರೋಶ ಹೆಚ್ಚುತ್ತಿದ್ದಂತೆ ಮತ್ತೆ ಕೆಲಸ ಕೊಟ್ಟ ಅಧಿಕಾರಿಗಳು! ಫಲಿಸಿತು #IStandWithMallamma ಅಭಿಯಾನ

ವಿಧಾನಸೌಧದಲ್ಲಿ ಅಶ್ಲೀಲ ವಿಡಿಯೋ ನೋಡಿದವರಿಗೆ ಇಲ್ಲದ ಶಿಕ್ಷೆ, ಶಾವಿಗೆ ಒಣಹಾಕಿದ ಬಡಪಾಯಿಗೇಕೆ? ಶುರುವಾಯ್ತು ಅಭಿಯಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − one =
Remember me
