ಚಾಮರಾಜನಗರ:ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್​ ಕೊರತೆಯಿಂದ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಮೃತಪಟ್ಟ ಘಟನೆ ಇಡೀ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು. ಇದಕ್ಕೆಲ್ಲ ಕಾರಣ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಂದು ಕೆಲ ಜನಪ್ರತಿನಿಧಿಗಳು ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದರು.
ಎರಡೂ ಜಿಲ್ಲಾಡಳಿತಗಳ ನಡವಿನ ಸಮನ್ವಯ, ಸಂವಹನದ ಕೊರತೆಯಿಂದಲೇ ಅಮಾಯಕರ ಜೀವಗಳು ಬಲಿಯಾಗಬೇಕಾಯಿತು ಎಂಬ ಮಾತುಗಳು ದಟ್ಟವಾಗಿ ಕೇಳಿಬಂದಿದ್ದವು. ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತುರ್ತು ವೇಳೆ ಮೈಸೂರು ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡಲಿಲ್ಲ. ಘಟನೆ ನಡೆದ ದಿನ ಅಂದರೆ ಮೇ 2ರ ಸಂಜೆ ವೇಳೆಗೆ ನಮಗೆ 100 ಆಕ್ಸಿಜನ್​ ಸಿಲಿಂಡರ್​ ಬೇಕಿತ್ತು. ಸಕಾಲದಲ್ಲಿ ಸಿಲಿಂಡರ್ ಪೂರೈಕೆಯಾಗಲಿಲ್ಲ ಎನ್ನುವ ಮೂಲಕ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ರೋಹಿಣಿ ಸಿಂಧೂರಿಯತ್ತ ಬೆರಳು ತೋರಿಸಿದ್ದರು. ಇದೀಗ ಆಕ್ಸಿಜನ್​ ದುರಂತಕ್ಕೆ ರೋಹಿಣಿ ಸಿಂಧೂರಿ ಕಾರಣವಲ್ಲ ಎಂಬುದು ಬಯಲಾಗಿದೆ.
ಹೌದು, ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಆಕ್ಸಿಜನ್ ಕೊರತೆಯೇ ಕಾರಣ. ಮೇ 2ರ ರಾತ್ರಿ 11 ಗಂಟೆಯಿಂದ ಮೇ 3ರ ಮಧ್ಯರಾತ್ರಿವರೆಗೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜ‌ನ್ ಲಭ್ಯವಿರಲಿಲ್ಲ. ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲರಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆಕ್ಸಿಜನ್ ಸಾಗಿಸಲು ಯಾವುದೇ ತಡೆವೊಡಿಲ್ಲ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ್ ಗೌಡ ನೇತೃತ್ವದ ಕಾನೂನು‌ ಸೇವೆಗಳ ಪ್ರಾಧಿಕಾರದ ಸಮಿತಿ ಹೇಳಿದೆ. ಆ ಮೂಲಕ ರೋಹಿಣಿ ಸಿಂಧೂರಿಗೆ ಕ್ಲೀನ್​ಚಿಟ್​ ನೀಡಿದೆ.
ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಸೂಚಿಸಿರುವ ಸಮಿತಿ, ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತು ಪಡಿಸುವ ದಾಖಲೆಗಳಿಲ್ಲ ಎಂದು ಹೇಳಿದೆ.
ಇತ್ತ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ಸಿಗುತ್ತಿದ್ದಂತೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ರವಿ ಮೌನಕ್ಕೆ ಶರಣಾಗಿದ್ದಾರೆ. ಇಂದು ಬೆಳಗ್ಗೆಯಿಂದ ಅವರ ಮೊಬೈಲ್ ನಾಟ್ ರೀಚಬಲ್ ಆಗಿದೆ.
ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಮಹಿಳೆ ಮೃತಪಟ್ಟ ಸಿಟ್ಟಿಂದ ಹಾವು ಕೊಂದ ಕುಟುಂಬಸ್ಥರಿಗೆ ಶಾಕ್​! ತಾಯಿ ಸಾವಿಗೆ ಸೇಡು ತೀರಿಸಿಕೊಂಡ ಹಾವಿನ ಮರಿಗಳು

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 19 =
Remember me
