ಚಿಕ್ಕಬಳ್ಳಾಪುರ:ಗ್ರಾಮದೇವತೆ ಚೌಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಕಿಡಿಗೇಡಿಗಳು ಮಂಗಳವಾರ ರಾತ್ರೋರಾತ್ರಿ ಬೆಂಕಿ ಇಟ್ಟು ವಿಕೃತಿ ಮೆರೆದ ಘಟನೆ ಬಾಗೇಪಲ್ಲಿ ತಾಲೂಕಿನ ಮಾಡಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ.
ನಿನ್ನೆ(ಮಂಗಳವಾರ) ಮಾಡಪಲ್ಲಿಯಲ್ಲಿ ಗ್ರಾಮ ದೇವತೆಗಳಿಗೆ ಸಾವಿರಾರು ಭಕ್ತರು ತಂಬಿಟ್ಟಿನ ದೀಪೋತ್ಸವ ನೆರವೇರಿಸಿದ್ದರು. ಗ್ರಾಮದೇವತೆಗಳಿಗೆ ಕುರಿ, ಕೋಣ, ಮೇಕೆಗಳನ್ನು ಬಲಿ ಕೊಟ್ಟು ಸಂಬಂಧಿಕರಿಗೆ ಭೋಜನ ವ್ಯವಸ್ಥೆಯನ್ನೂ ಮಾಡುವ ಆಚರಣೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಗಂಗಮ್ಮ, ಸಪ್ಪಲಮ್ಮ, ಸತ್ಯಮ್ಮ, ಗೊಡ್ಡೆಮ್ಮ ದೇವರ ಜತೆ ಊರನ್ನು ಕಾಯುವ ಚೌಡೇಶ್ವರಿ ದೇವಿಯನ್ನು ಮಹಾಶಕ್ತಿ ಎಂದೇ ಗ್ರಾಮಸ್ಥರು ಪೂಜಿಸುತ್ತಿದ್ದಾರೆ. ಪ್ರತಿ ವರ್ಷ ಯುಗಾದಿ ಹಬ್ಬದ ಬಳಿಕ ಗ್ರಾಮದಲ್ಲಿ ದೇವರ ಉತ್ಸವ ನಡೆಸುತ್ತಾರೆ. ಅದೇ ರೀತಿ ಮಂಗಳವಾರ ತಂಬಿಟ್ಟಿನ ದೀಪೋತ್ಸವ ನೆರವೇರಿಸಿದ್ದರು. ಸಂಬಂಧಿಕರಿಗೆ ಮಾಂಸಾಹಾರ ಮಾಡಲಾಗಿತ್ತು.
ಮಂಗಳವಾರ ರಾತ್ರಿ ಚೌಡೇಶ್ವರಿ ದೇವಿ ಉತ್ಸವ ಮೂರ್ತಿಯನ್ನ ಮೆರವಣಿಗೆ ಮಾಡಿ ಮನೆ ಮನೆಯಿಂದ ಪೂಜೆ ಸ್ವೀಕರಿಸಲಾಗಿತ್ತು. ಮಧ್ಯರಾತ್ರಿ 1.40 ಗಂಟೆಗೆ ಉತ್ಸವ ಮೂರ್ತಿಯನ್ನು ಊರ ಹೊರವಲಯದಲ್ಲಿರುವ ದೇಗುಲದಲ್ಲಿ ಇಟ್ಟು ಭಕ್ತರು ವಾಪಸ್​ ಬಂದಿದ್ದರು. ಇದಾದ ಕೆಲವೇ ನಿಮಿಷದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಗ್ರಾಮಸ್ಥರು ಹೋಗುವಷ್ಟರಲ್ಲಿ ದೇವಿಯ ಮೂರ್ತಿ ಭಸ್ಮವಾಗಿದೆ. ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ತಪ್ಪಿತಸ್ಥರನ್ನು ಪತ್ತೆ ಮಾಡಿ ಕಾನೂನು ಮೂಲಕ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗ್ಳೂರಲ್ಲಿ ಕನ್ನಡ ಮಾತನಾಡಿದ್ದಕ್ಕೆ ಯುವಕನ ಕೊಲೆ! ಸ್ಫೋಟಕ ರಹಸ್ಯ ಬಿಚ್ಚಿಟ್ಟ ಹೋಂ ಮಿನಿಸ್ಟರ್

ಚಂದ್ರು ಕೊಲೆ ಕೇಸ್​: ಪೊಲೀಸರು ಮತ್ತು ಅರಗ ಜ್ಞಾನೇಂದ್ರ- ಸಿ.ಟಿ.ರವಿ ಹೇಳಿಕೆ… ಒಂದಕ್ಕೊಂದು ಸಂಬಂಧವೇ ಇಲ್ಲ

ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 9 =
Remember me
