ಚಿಕ್ಕಬಳ್ಳಾಪುರ:ಶನಿವಾರ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ಅಕ್ಕ-ತಂಗಿ ಶವವಾಗಿ ಇಂದು(ಭಾನುವಾರ) ಮಧ್ಯಾಹ್ನ ಪತ್ತೆಯಾಗಿದ್ದಾರೆ.
ಅಗಲಗುರ್ಕಿ ಗ್ರಾಮದ ಅಶ್ವಿನಿ(16) ಮತ್ತು ನಿಶ್ಚಿತಾ(14) ಮೃತ ಅಕ್ಕ-ತಂಗಿ. ಅಕ್ಕ ಅಶ್ವಿನಿ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಗೊತ್ತಾಗಿ ಮಗಳಿಗೆ ಅಪ್ಪ-ಅಮ್ಮ ಬೈದು ಬುದ್ಧಿವಾದ ಹೇಳಿದ್ದರು. ಮನನೊಂದ ಅಶ್ವಿನಿ, ತನ್ನ ತಂಗಿಯನ್ನೂ ಕರೆದುಕೊಂಡು ಮನೆಯಿಂದ ನಿನ್ನೆ ಸಂಜೆ ಹೊರ ಹೋಗಿದ್ದಳು. ರಾತ್ರಿ ಎಷ್ಟೊತ್ತಾದರೂ ಅಕ್ಕ-ತಂಗಿ ಇಬ್ಬರೂ ಮನೆಗೆ ವಾಪಸ್​ ಬಂದಿರಲಿಲ್ಲ. ಮನೆಯವರು ಊರೆಲ್ಲಾ ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ.
ಇಂದು(ಭಾನುವಾರ) ಮಧ್ಯಾಹ್ನ ಚಿಕ್ಕಬಳ್ಳಾಪುರ ನಗರದ ಕಂದವಾರ ಕೆರೆಯಲ್ಲಿ ಅಕ್ಕ-ತಂಗಿ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ, ಮಗಳೇ ಇದೆಂಥಾ ಶಿಕ್ಷೆ ಕೊಟ್ಟವ್ವಾ? ನೀನಾದ್ರೂ ಎದ್ದೇಳವ್ವಾ, ಇಬ್ರೂ ನಮ್ಮನ್ನ ಬಿಟ್ಟು ಯಾಕ್ರವ್ವ ಹೋಗಿಬಿಟ್ರಿ ಎಂದು ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಂದೆ-ತಾಯಿ ಬೈದಿದ್ದಕ್ಕೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ

ಮಹಿಳೆಯ ಕಾಟ ಸಹಿಸಲಾಗದೆ ಯುವಕ ಆತ್ಮಹತ್ಯೆ: ಸಾವಿಗೂ ಮುನ್ನ ಆತ ಮಾಡಿಟ್ಟ ವಿಡಿಯೋದಲ್ಲಿದೆ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
