ಶಿವಮೊಗ್ಗ:ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡಿ ಎಂಬ ಮಾತು ಇದುವರೆಗೆ ನಡೆಯುತ್ತಿತ್ತು. ಆದರೀಗ ಒಂದು ಸುಳ್ಳು ಹೇಳಿ ಮದುವೆ ಮಾಡಿದ್ರೆ ಕಂಬಿ ಹಿಂದೆ ಹೋಗಬೇಕಾಗುತ್ತೆ ಹುಷಾರ್!
ಹೌದು, ಸರ್ಕಾರ ನಿಗದಿಪಡಿಸಿದ ವಯಸ್ಸು ಆಗಿದೆ ಎಂದು ಅಪ್ರಾಪ್ತರಿಗೆ ಮದುವೆ ಮಾಡಿಸಿದರೆ ಕೇಸು ಬೀಳಲಿದೆ. ಕಲ್ಯಾಣ ಮಂದಿರಗಳ ಮಾಲೀಕರು, ಆಡಳಿತ ಮಂಡಳಿ, ಮದುವೆ ಮಾಡಿಸುವ ಅರ್ಚಕರು, ಆಮಂತ್ರಣ ಪತ್ರಿಕೆ ಮುದ್ರಣ ಮಾಡಿಕೊಡುವ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಸೇರಿದಂತೆ ಅಪ್ರಾಪ್ತರ ಮದುವೆಗೆ ಸಹಕಾರ ನೀಡುವ ಪ್ರತಿಯೊಬ್ಬರ ಮೇಲೂ ಕೇಸು ಹಾಕಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯಲ್ಲಿ ಈ ಸೂಚನೆ ನೀಡಿದ ಜಿಲ್ಲಾಧಿಕಾರಿ, ಹಲವು ಕ್ರಮಗಳನ್ನು ಕೈಗೊಂಡರೂ ಬಾಲ್ಯವಿವಾಹ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಇನ್ಮುಂದೆ ಬಾಲ್ಯವಿವಾಹ ನಡೆಯುವ ಕಲ್ಯಾಣ ಮಂದಿರ, ದೇವಸ್ಥಾನಗಳ ಸಮಿತಿ ಪ್ರಮುಖರು, ವಿವಾಹ ಮಾಡಿಸುವ ಅರ್ಚಕರು, ಆಮಂತ್ರಣ ಪತ್ರಿಕೆ ಮುದ್ರಿಸುವವರ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂದು ನಿರ್ದೇಶನ ನೀಡಿದರು.
ಬಾಲ್ಯವಿವಾಹ ಕುರಿತು ಜಾಗೃತಿ ಮೂಡಿಸಲು ಡಿಡಿಪಿಐ ಹಾಗೂ ಡಿಡಿಪಿಯು ಅವರು ಪ್ರಾಚಾರ್ಯರು, ಮುಖ್ಯ ಶಿಕ್ಷಕರನ್ನು ಕರೆಸಿ ಮಕ್ಕಳ ಕಲ್ಯಾಣ ಸಮಿತಿ ಸಹಯೋಗದಲ್ಲಿ ಸಭೆ ನಡೆಸಬೇಕು. ಮಕ್ಕಳಲ್ಲಿ ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆ ಮೂಡಿಸಬೇಕು ಎಂದರು.
ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

ಡ್ರಾಪ್​ ಕೊಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಬೆಂಗಳೂರಲ್ಲಿ ಪೊಲೀಸ್​ ಪೇದೆ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − seven =
Remember me
