ಬೆಂಗಳೂರು:ನೂರಾರು ಕನಸಿನ ಬುತ್ತಿಯೊಂದಿಗೆ ಪ್ರೀತಿಸುತ್ತಿದ್ದ ಯುವಕನನ್ನೇ ಮನೆಯವರ ಮನವೊಲಿಸಿ ಮದ್ವೆಯಾಗಿದ್ದ ಯುವತಿ ಬಾಳಲ್ಲಿ ದುರಂತ ಸಂಭವಿಸಿದೆ. ಮದ್ವೆಯಾದ 4 ತಿಂಗಳಿಗೇ ಆಕೆ ಬದುಕಿನ ಪಯಣ ಮುಗಿಸಿದ್ದಾಳೆ.
ಕಡೂರು ತಾಲೂಕು ಬೋಳನಹಳ್ಳಿಯ ರವಿಕುಮಾರ್ ಮತ್ತು ಹೇಮಾವತಿ ದಂಪತಿಯ ಎರಡನೇ ಪುತ್ರಿ ಅಂಜು ಬಿ.ಆರ್. (26) ಮೃತ ದುರ್ದೈವಿ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್​ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು. ಹಾಸನದಲ್ಲಿ ಓದುವಾಗಲೇ ಅಂಜು ಮತ್ತು ಅರಕಲಗೂಡಿನ ಅಂಜುಮ್ ಪಣಿಯಾರ್ ನಡುವೆ ಪ್ರೀತಿಯಾಗಿತ್ತು. ನಂತರ ಪೋಷಕರನ್ನ ಒಪ್ಪಿಸಿ ಕಳೆದ ಫೆಬ್ರವರಿಯಲ್ಲಿ ಕಡೂರಿನ ಬಳ್ಳಕೆರೆಯಲ್ಲಿ ಪ್ರಿಯಕರನ ಜತೆ ಅಂಜು ಮದ್ವೆಯಾಗಿದ್ದಳು. ದಂಪತಿ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ ನಿನ್ನೆ(ಶನಿವಾರ) ಸಂಜೆ ಮನೆಯಲ್ಲೇ ಅಂಜು ನೇಣಿಗೆ ಕೊರಳೊಡ್ಡಿದ್ದಾಳೆ.
ಮಗಳ ಸಾವಿನ ಸುದ್ದಿ ಕೇಳಿ ಆಘಾತಗೊಂಡ ಪಾಲಕರು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್​ ಠಾಣೆಗೆ ದೂರು ನೀಡದ್ದಾರೆ. ಗಂಡನ ಮನೆಯಲ್ಲಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ನಮ್ಮ ಬಳಿ ಕಷ್ಟ ಹೇಳಿಕೊಂಡಿದ್ದಳು. ಆಕೆಯನ್ನು ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರೀತಿಸಿ ಮದ್ವೆಯಾದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು! ಅನುಮಾನ ಹುಟ್ಟಿಸಿದೆ ಆಕೆಯ ಬಲಕಿವಿ ಮಿಸ್ಸಿಂಗ್‌

ತಂದೂರಿ ಚಿಕನ್ ಸೇವಿಸಿದ ದ್ವಿತೀಯ ಪಿಯು ವಿದ್ಯಾರ್ಥಿ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
