ಬೆಂಗಳೂರು:ಸಾಮಾಜಿಕ ನ್ಯಾಯ ಪ್ರತಿಪಾದಿಸುವ ಜತೆಗೆ ಅನುಷ್ಠಾನಕ್ಕೆ ತಂದವರು ಮಾತ್ರ ಡಿ.ದೇವರಾಜ ಅರಸು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಗುಣಗಾನ ಮಾಡಿದರು.
ದೇವರಾಜ ಅರಸು ಪುಣ್ಯತಿಥಿ ನಿಮಿತ್ತ ವಿಧಾನಸೌಧ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅನೇಕ ವಿರೋಧಗಳನ್ನು ಲೆಕ್ಕಿಸದೆ ಭೂಸುಧಾರಣಾ ಕಾಯ್ದೆ ಜಾರಿಗೆ ತಂದಿದ್ದರಿಂದ ಕರ್ನಾಟಕದಲ್ಲಿ ಅತಿಹೆಚ್ಚು ಜನರು ಭೂಒಡೆಯರಾಗಲು ಸಾಧ್ಯವಾಯಿತು. ಅರಸು ಅವರು ಕೈಗಾರೀಕರಣಕ್ಕೂ ಒತ್ತು ನೀಡಿದ್ದರು ಎಂದರು.
ಮೂವರ ಗೆಲುವು ನಿಶ್ಚಿತ: ರಾಜ್ಯಸಭೆ ಚುನಾವಣೆಯಲ್ಲಿ ಪ್ರತಿಬಾರಿ ಬದಲಾವಣೆಗಳಾಗಿವೆ. ಕಳೆದ ಬಾರಿ ಏಳು ಶಾಸಕರು ಬಹಿರಂಗ ಬಂಡಾಯ ಸಾರಿ ತಮ್ನದೇ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ಯಾವುದೇ ಪಕ್ಷಕ್ಕೆ ಸೇರದ ಉದ್ಯಮಿ ಆಯ್ಕೆಯಾದದ್ದಿದೆ. ರಹಸ್ಯ ಮತದಾನದ ಸಂದರ್ಭದಲ್ಲೂ ಅನೇಕ ಬದಲಾವಣೆಗಳಾಗಿವೆ. ಈ ಬಾರಿ ಚುನಾವಣೆಯಲ್ಲೂ ಅಂತಹ ಬದಲಾವಣೆ ಸಾಧ್ಯವಿದ್ದು, ಪಕ್ಷದಿಂದ ಸ್ಪರ್ಧಿಸಿರುವ ಮೂವರು ಗೆಲ್ಲಲಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್, ಮಾಜಿ ಶಾಸಕ ಲೆಹರ್ ಸಿಂಗ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ದೇವರಾಜ ಅರಸು ಕುಟುಂಬದ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.
ಭರತನಾಟ್ಯ ಮೊದಲ ಪ್ರದರ್ಶನದಲ್ಲೇ ಮೋಡಿ ಮಾಡಿದ ಅಂಬಾನಿ ಭಾವಿ ಸೊಸೆ! ಅತ್ತೆಯಂತೆ ಸೊಸೆಯೂ ಉತ್ತಮ ಕಲಾವಿದೆ

ಬಟ್ಟೆ ಸರಿಸಿ ತೊಡೆ ಸವರುತ್ತಿದ್ದ.. ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ಬೆಂಗ್ಳೂರಲ್ಲಿ ಬಾಲಿವುಡ್​ ನಟಿ ಅನುಭವಿಸಿದ ನೋವು ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fourteen =
Remember me
