ಬೆಂಗಳೂರು:ಜನಸಂಕಲ್ಪ ಯಾತ್ರೆ ಮಧ್ಯೆ ಭೇಟಿಗೆ ಕಾಲಾವಕಾಶ ನೀಡಬೇಕು ಎಂದು ವರಿಷ್ಠರಿಗೆ ಕೇಳಿಕೊಂಡಿದ್ದು, ಕಾಲಾವಕಾಶ ನೀಡಿದರೆ ಇದೇ ವಾರ ದೆಹಲಿಗೆ ತೆರಳುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ಸೇರಿ ಇನ್ನಿತರ ವಿಷಯಗಳ ಚರ್ಚೆಗಾಗಿ ದೆಹಲಿಗೆ ಹೋಗಬೇಕೆಂದಿರುವೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಯಾವುದೇ ಎಚ್ಚರಿಕೆ ನೀಡಿಲ್ಲ. ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಪ್ರಸ್ತಾವನೆ ಸಲ್ಲಿಸಲು ನನ್ನನ್ನು ಭೇಟಿ ಮಾಡಿದ್ದರು. ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾಮಗಾರಿಗಳ ಬಗ್ಗೆ ಸಮಾಲೋಚಿಸಿದರು ಎಂದು ಸಮಜಾಯಿಷಿ ನೀಡಿದರು.
ಮೀಸಲು ಹೆಚ್ಚಳ ಬೇಡಿಕೆಗಳ ಬಗ್ಗೆ ಈಗಾಗಲೇ ವಿಧಾನ ಮಂಡಲ ಅಧಿವೇಶನದಲ್ಲಿ ಸ್ಪಷ್ಟಪಡಿಸಿರುವೆ. ಎಲ್ಲ ಸಮುದಾಯಗಳಿಗೆ ಮೀಸಲು ಹೆಚ್ಚಿಸಬೇಕೆಂಬ ಆಕಾಂಕ್ಷೆ ಇರುವುದು ಸಹಜ, ಅದಕ್ಕಾಗಿ ಮನವಿ ಸಲ್ಲಿಸುವುದು ತಪ್ಪೇನಲ್ಲ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ, ವಿವಿಧ ಸಮಿತಿಗಳು ವರದಿ ಸಲ್ಲಿಸಿದ ಬಳಿಕ ಚರ್ಚಿಸಿ ಕಾನೂನು ಪ್ರಕಾರ ಕ್ರಮವಹಿಸುವೆ ಎಂದು ಪುನರುಚ್ಚರಿಸಿದರು.
ವರದಿಗೆ ಸೂಚನೆ:ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಬಗ್ಗೆ ತನಿಖೆ ನಡೆಸಿ ಪ್ರಾಥಮಿಕ ವರದಿ ನೀಡುವಂತೆ ಪೊಲೀಸರಿಗೆ ಸೂಚಿಸಿರುವೆ. ಈ ವರದಿ ಬಂದ ನಂತರ ತಪ್ಪಿತಸ್ಥರು ಯಾರೇ ಇರಲಿ ಕ್ರಮಕೈಗೊಳ್ಳಲಾಗುವುದು. ವಿಷಯ ತಿಳಿದ ತಕ್ಷಣ ಬಿಬಿಎಂಪಿ ಆಯಕ್ತರಿಗೆ ಮಾತನಾಡಿ ಸ್ಥಳ ಪರಿಶೀಲಿಸಿ ಅಗತ್ಯ ಕ್ರಮವಹಿಸಲು ತಿಳಿಸಿರುವೆ. ಕೆಲವು ಕಡೆ ರಸ್ತೆ ಗುಂಡಿಗಳು ಮುಚ್ಚಿದ್ದರೂ ಮತ್ತೆ ಕಿತ್ತು ಹೋಗಿರುವುದು ಗಮನಕ್ಕೆ ಬಂದಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಮತ್ತೊಂದು ಐತಿಹಾಸಿಕ ಹೋರಾಟಕ್ಕೆ ಸಜ್ಜಾಗಿ… ಒಕ್ಕಲಿಗ ಸಮುದಾಯಕ್ಕೆ ಆದಿಚುಂಚನಗಿರಿ ಶ್ರೀಗಳು ಕರೆ

ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆ: ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − thirteen =
Remember me
