ಬೆಂಗಳೂರು:ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್​ ಸಿಂಗ್​, ತನ್ನ ಬೇಡಿಕೆ ಈಡೇರಿಸಿಕೊಳ್ಳಲು ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ. ಅತ್ತ ಯಾವುದೇ ಒತ್ತಡಕ್ಕೂ ಸೊಪ್ಪು ಹಾಕಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದು, ಬೊಮ್ಮಾಯಿ ಸಂಪುಟದತ್ತ ಎಲ್ಲರ ಚಿತ್ತ ಮೂಡಿದೆ.
ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಮಾಡಬೇಡಿ. ಈಗ ಖಾತೆ ಬದಲಾವಣೆ ಮಾಡಿದರೆ ಮತ್ತೊಬ್ಬರು ಖಾತೆ ಕ್ಯಾತೆ ತೆಗೆಯುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರು ಮತ್ತು ಆರ್​ಎಸ್​ಎಸ್​ನಿಂದ ಸಿಎಂಗೆ ಸಲಹೆ ಬಂದಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆ ಮಂಗಳವಾರ ದೂರವಾಣಿ ಮೂಲಕ ಮಾತನಾಡಿರುವ ಸಿಎಂ, ಇಬ್ಬರು ಸಚಿವರ ಅಸಮಾಧಾನದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಸಮಾಧಾನ ಶಮನಗೊಳಿಸಿ ಆಡಳಿತಕ್ಕೆ ಚುರುಕು ನೀಡಿ. ಇಬ್ಬರು ಸಚಿವರನ್ನ ಕರೆಸಿ ಮಾತನಾಡಿ, ಸಮಸ್ಯೆ ಬಗೆಹರಿಸಿಕೊಳ್ಳಿ. ಖಾತೆ ಹಂಚಿಕೆ ಬದಲಾವಣೆ ನಿಮ್ಮ ವಿವೇಚನೆಗೆ ಬಿಟ್ಟದ್ದು, ಆದರೆ ಸಚಿವರ ಬೆದರಿಕೆ ತಂತ್ರಗಳಿಗೆ ಮಣಿಯಬೇಡಿ ಎಂದು ಅರುಣ್ ಸಿಂಗ್ ಸೂಚನೆ ಕೊಟ್ಟಿದ್ದಾರಂತೆ.
ಬುಧವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಎಂಟಿಬಿ ನಾಗರಾಜ ಜತೆ ಮಾತಾಡಿದ್ದೇನೆ, ಎಲ್ಲ ಸರಿಯಾಗಿದೆ. ಆನಂದ್ ಸಿಂಗ್ ನನಗೆ 3 ದಶಕದ ಗೆಳೆಯ. ಅವರ ಜತೆ ಮಾತಾಡ್ತೇನೆ. ಮೂರು ದಿನ ಹಿಂದೆ ಬಂದು ಅವರು ನನ್ನೊಂದಿಗೆ ಮಾತಾಡಿದ್ರು ಅಷ್ಟೆ. ರಾಜೀನಾಮೆ ಪತ್ರ ಕೊಟ್ಟಿಲ್ಲ. ಮತ್ತೊಮ್ಮೆ ಮಾತನಾಡಲು ಇಂದು ಕರೆದಿದ್ದೇನೆ. ಇವತ್ತು ಬರಬಹುದು, ನಾಳೆ ನಾನು ಮಂಗಳೂರಿಗೆ ಹೋಗ್ತೀನಿ. ಇಂದು ಆನಂದ್​ಸಿಂಗ್​ ಬರದಿದ್ರೆ ನಾಡಿದ್ದು ಬರಬಹುದು ಎಂದರು.
ಅಮ್ಮನ ಮಾತು ಕೇಳಿದ್ದರೆ ವಿವೇಕ್​ ಸಾಯುತ್ತಲೇ ಇರಲಿಲ್ಲ..! ಮುಗಿಲುಮುಟ್ಟಿದೆ ಹೆತ್ತವ್ವನ ಆಕ್ರಂದನ

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಜತೆಗೆ ರಾಜಕೀಯಕ್ಕೇ ನಿವೃತ್ತಿ ಘೋಷಿಸಲು ಸಜ್ಜಾದ ಆನಂದ್ ಸಿಂಗ್!

ಮದ್ವೆಯಾದ 23 ದಿನಕ್ಕೇ ನವದಂಪತಿ ದುರಂತ ಸಾವು! ಅತ್ತಿಗೆಯ ಪ್ರಾಣವೂ ಹೋಯ್ತು…

ವಿವೇಕ್​ ಸಾವು ಪ್ರಕರಣ: ಕೇಸ್​ ದಾಖಲಿಸ್ತೀವಿ ಅಂದವರು ಆ ಒಂದು ಫೋನ್​ ಕಾಲ್​ಗೆ ಸುಮ್ಮನಾದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
