ಬೆಂಗಳೂರು:ರಾಜ್ಯಸಭೆ ಚುನಾವನೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಜತೆ ಚರ್ಚೆ ಮಾಡದ ಜೆಡಿಎಸ್​ಗೀಗ ಸ್ವಾಭಿಮಾನ ಕಾಡುತ್ತಿದೆ. ಕಾಂಗ್ರೆಸ್​ನ ಎಲ್ಲ ನಾಯಕರು ಹಾಗೂ ಕಾರ್ಯಕರ್ತರ ಜತೆ ಚರ್ಚೆ ಮಾಡಿಯೇ ಎರಡನೇ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ. ಹಾಗಾಗಿ ನನ್ನ ವೈಯಕ್ತಿಕ ಅಭಿಪ್ರಾಯ ಹಂಚಿಕೊಳ್ಳಲು ಸಾಧ್ಯವಿಲ್ಲ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳಿ, ರಂಪಾಟ ಮಾಡಿಕೊಂಡು ಚುನಾವಣೆ ನಡೆಸಲು ನಾನು ಸಿದ್ಧನಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.
ಈ ಹಿಂದೆ ನಮ್ಮಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದ ಹಿತದೃಷ್ಟಿಯಿಂದ ನಾವು ಸಾಕಷ್ಟು ಬಾರಿ ಜೆಡಿಎಸ್ ಬೆಂಬಲಕ್ಕೆ ನಿಂತಿದ್ದೇವೆ. ಜಾತ್ಯತೀತ ತತ್ವವನ್ನು ಉಳಿಸಿಕೊಳ್ಳಲು ಈ ಬಾರಿ ಕಾಂಗ್ರೆಸ್​ಗೆ ಬೆಂಬಲ ನೀಡಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲ ಅವರು ಮನವಿ ಮಾಡಿದ್ದು, ಅದು ಹೈಕಮಾಂಡ್ ತೀರ್ಮಾನವಾಗಿರುತ್ತದೆ. ಹೀಗಾಗಿ ಈ ಬಾರಿಯ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡಲಿ ಎಂದು ಮನವಿ ಮಾಡಿದ್ದಾರೆ.
ಕುಮಾರಸ್ವಾಮಿಯವರು ಮೈತ್ರಿ ಸರ್ಕಾರ ಪತನವಾಗುವ ಸಂದರ್ಭದಲ್ಲಿ ವಿದೇಶಕ್ಕೆ ತೆರಳಿದ ಬಗ್ಗೆ ಹಾಗೂ ಇತರ ವಿಚಾರವಾಗಿ ಸಾಕಷ್ಟು ಮಾತನಾಡಿದ್ದಾರೆ. ಕುಮಾರಸ್ವಾಮಿ ಅವರು ಏನು ಮಾತನಾಡಿದ್ದಾರೆ, ಇಬ್ರಾಹಿಂ ಅವರು ಏನೆಲ್ಲಾ ಹೇಳಿದ್ದಾರೆ ಎಂಬುದರ ಬಗ್ಗೆ ಮಾಧ್ಯಮಗಳಲ್ಲಿ ದಾಖಲೆಗಳಿವೆ. 37 ಶಾಸಕರಿದ್ದರೂ ಕಾಂಗ್ರೆಸ್ ಯಾವುದೇ ಷರತ್ತಿಲ್ಲದೆ ಅವರನ್ನು ಮುಖ್ಯಮಂತ್ರಿ ಮಾಡಿತ್ತು. ಆ ಸಂದರ್ಭದಲ್ಲಿ ಏನೆಲ್ಲ ಮಾತುಗಳಾಗಿದ್ದವು ಎಂಬುದು ಶಾಸಕರಿಗೆ ತಿಳಿದಿದೆ. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಹೀಗಾಗಿ ಈ ವಿಚಾರವಾಗಿ ನಾನು ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.
ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದರೂ ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಮಾತಾಡುತ್ತೇನೆ. ಕಾಂಗ್ರೆಸ್ ಎಂದರೆ ನಾನೊಬ್ಬ ಮಾತ್ರವಲ್ಲ. ಎಲ್ಲ ನಾಯಕರು ಹಾಗೂ ಕಾರ್ಯಕರ್ತರ ಜತೆ ಚರ್ಚೆ ಮಾಡಿಯೇ ಎರಡನೇ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ. ಹೀಗಾಗಿ ಈ ಸಂದರ್ಭದಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಹಂಚಿಕೊಳ್ಳಲು ಸಾಧ್ಯವಿಲ್ಲ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳಿ, ರಂಪಾಟ ಮಾಡಿಕೊಂಡು ಚುನಾವಣೆ ನಡೆಸಲು ನಾನು ಸಿದ್ಧನಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದರು.
ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಶಾಸ್ತ್ರ: ದೇವೇಗೌಡರ ಮರಿಮೊಮ್ಮಗನ ಹೆಸರು ಹೀಗಿದೆ

ನಗರಸಭೆ ಸದಸ್ಯನ ಹತ್ಯೆ: ಭಕ್ತರ ಸೋಗಲ್ಲಿ ದೇಗುಲದ ಎದರೇ ಕೊಚ್ಚಿ ಕೊಲೆ, ಗ್ರಾಪಂ ಮಾಜಿ ಸದಸ್ಯೆ ಮೇಲೆ ಖಾಕಿ ಕಣ್ಣು

ಸತ್ತ ಗಂಡ ಹಾವಿನ ರೂಪದಲ್ಲಿ ಮನೆಗೆ ಬಂದನೇ..? ಬಾಗಲಕೋಟೆಯಲ್ಲಿ ಹಾವಿನ ಜತೆ 4 ದಿನ ವಾಸವಿದ್ದ ಅಜ್ಜಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
