ರಾಯಚೂರು:ನಗರದಲ್ಲಿ ಕಲುಷಿತ ನೀರು ಪೂರೈಕೆಯಿಂದ ವಾಂತಿಭೇದಿ ಉಲ್ಬಣಿಸಿ ಹಲವರು ಅಸ್ವಸ್ಥಗೊಂಡ ಪ್ರಕರಣದಲ್ಲಿ ಇಂದು(ಜೂ.8) ಮತ್ತೊಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿದೆ.
ರಾಂಪುರ ಜಲಾಶಯದಿಂದ ನಗರದ 14 ವಾರ್ಡ್​ಗಳಿಗೆ ನೀರನ್ನು ಶುದ್ಧೀಕರಿಸದೆ ಪೂರೈಕೆ ಮಾಡುತ್ತಿರುವುದರಿಂದ ಈ ನೀರನ್ನು ಕುಡಿದವರ ಆರೋಗ್ಯ ಹದಗೆಟ್ಟಿದೆ. ಮೇ 31ರಂದು ಕಲುಷಿತ ನೀರು ಕುಡಿದು ಮಕ್ಕಳು ಸೇರಿ ನೂರಾರು ಮಂದಿ ಅಸ್ವಸ್ಥಗೊಂಡಿದ್ದರು. ಅಂದು ಇಂದಿರಾ ನಗರದ ಮಲ್ಲಮ್ಮ(40) ವಾಂತಿಯಿಂದ ಮೃತಪಟ್ಟಿದ್ದಳು. ಸಾವಿನ ಸರಣಿ ಮುಂದುವರಿದಿದ್ದು, ಇದುವರೆಗೆ ನಾಲ್ವರು ದುರಂತ ಅಂತ್ಯ ಕಂಡಿದ್ದಾರೆ.
ಮಲ್ಲಮ್ಮ ಮೃತಪಟ್ಟ ಮೂರು ದಿನಕ್ಕೆ 7 ವಾರ್ಡ್​ನ ಅಬ್ದುಲ್ ಗಫೂರ್(37) ಕೊನೆಯುಸಿರೆಳೆದಿದ್ದರು. ನಂತರ ಅರಬ್ ಮೊಹಲ್ಲಾದ ಮಹ್ಮದ ನೂರ್(43) ಎಂಬುವವರು ಮೃತಪಟ್ಟರು. ನಗರಸಭೆ ಎಚ್ಚೆತ್ತ ನಗರಸಭೆ ನೀರು ಶುದ್ಧೀಕರಣ ಘಟಕದ ಸ್ವಚ್ಛತೆಗೆ ಮುಂದಾಯಿತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಪೌರಾಡಳಿತ ನಿರ್ದೇಶಕರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದರು. ಮೃತರ ಮೂರು ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಇದರ ನಡುವೆ ನಗರಸಭೆಯು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಿದೆ. ಆದರೆ, ಸಾವಿನ ಸರಣಿ ಮಾತ್ರ ನಿಂತಿಲ್ಲ. ಇದೇ ಪ್ರಕರಣದಲ್ಲಿ ಅಸ್ವಸ್ಥಗೊಂಡ ಮತ್ತೊಬ್ಬ ವ್ಯಕ್ತಿಯೂ ಇಂದು ಮೃತಪಟ್ಟಿದ್ದಾರೆ. ಅಂದ್ರೂನ್ ಕಿಲ್ಲಾ ಅಬ್ದುಲ್ ಕರೀಂ (50) ಮೃತಪಟ್ಟಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ನಗರಸಭೆ ಸದಸ್ಯನ ಹತ್ಯೆ: ಭಕ್ತರ ಸೋಗಲ್ಲಿ ದೇಗುಲದ ಎದರೇ ಕೊಚ್ಚಿ ಕೊಲೆ, ಗ್ರಾಪಂ ಮಾಜಿ ಸದಸ್ಯೆ ಮೇಲೆ ಖಾಕಿ ಕಣ್ಣು

ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಶಾಸ್ತ್ರ: ದೇವೇಗೌಡರ ಮರಿಮೊಮ್ಮಗನ ಹೆಸರು ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
