ಬೆಂಗಳೂರು:ಆಂಬುಲೆನ್ಸ್ ಸಿಗದೆ ತಾಯಿಯ ಶವವನ್ನು ಬೆಂಗಳೂರಿನಂದ ಮಂಡ್ಯದವರೆಗೂ ಆಟೋದಲ್ಲೇ ಮಗ ಕೊಂಡೊಯ್ದ ಘಟನೆ ಕರೊನಾದ ಕಾರಳತೆಯನ್ನ ಮತ್ತೊಮ್ಮೆ ಬಿಚ್ಚಿಡುತ್ತಿದೆ.
ಮಹಾಮಾರಿ ಕರೊನಾ ಸೋಂಕಿಗೆ ತುತ್ತಾಗಿದ್ದ ತಾಯಿ ಶಾರದಮ್ಮ(73)ಳನ್ನು ಬದುಕಿಸಿಕೊಳ್ಳಲೇಬೇಕೆಂದು ಮಂಡ್ಯ ಜಿಲ್ಲೆ ಮಳವಳ್ಳಿಯಿಂದ ಬೆಂಗಳೂರಿಗೆ ತಾಯಿಯನ್ನ ಕರೆದುಕೊಂಡು ಮಗ ಶಿವಕುಮಾರ್​ ಬಂದಿದ್ದ. ಬೆಡ್​​ಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದ. ನನ್ನ ತಾಯಿಯನ್ನ ಉಳಿಸಿಕೊಡಿ ಎಂದಿ ಅಂಗಲಾಚಿದ್ದ. ಕೊನೆಗೂ ಖಾಸಗಿ ಆಸ್ಪತ್ರೆಯೊಂದರಲ್ಲಿ ತಾಯಿಗೆ ಚಿಕಿತ್ಸೆ ಕೊಡಿಸಲು ದಾಖಲಿಸಿ ನಿಟ್ಟುಸಿರು ಬಿಟ್ಟನಾದರೂ ಆ ತಾಯಿ ಬದುಕಲಿಲ್ಲ.
ತಾಯಿಯನ್ನ ಕಳೆದುಕೊಂಡ ನೋವಿನಲ್ಲೇ ಶವವನ್ನು ಊರಿಗೆ ಕೊಂಡೊಯ್ಯಲು ಪರದಾಡುವ ದುಸ್ಥಿತಿ ಉಂಟಾಯಿತು. ಆಂಬುಲೆನ್ಸ್​ಗಾಗಿ ಪರದಾಡಿದರೂ ಸಿಗಲಿಲ್ಲ. ಊರಿಗೆ ಮೃತದೇಹ ಕೊಂಡಯ್ಯಲೇಬೇಕೆಂದು ಪಣತೊಟ್ಟ ಶಿವಕುಮಾರ್​. ಆಟೋ ಚಾಲಕರೊಬ್ಬರ ಬಳಿ ಅಂಗಲಾಚಿದ. ಮಾನವೀಯತೆ ಮೆರೆದ ಆಟೋ ಚಾಲಕ ಶಗ ಸಾಗಿಲು ಒಪ್ಪಿದರು.
ಕರೊನಾದಿಂದ ಶಾರದಮ್ಮ ಮೃತಪಟ್ಟಿದ್ದರೂ ಆಸ್ಪತ್ರೆಯವರು ಮೃತದೇಹಕ್ಕೆ ಪಿಪಿಇ ಕಿಟ್​ ಅನ್ನೂ ಹಾಕದೆ ಶವ ಹಸ್ತಾಂತರಿಸಿದ್ದಾರೆ. ತಾಯಿ ಶವವನ್ನು ಆಟೋದಲ್ಲಿ ಮಲಗಿಸಲು ಸಾಧ್ಯವಾಗದೆ ಕೂರಿಸಿದ್ದಾರೆ. ಆಟೋದಲ್ಲಿ ಕುಲುಕಿ ಬೀಳದಂತೆ ಅಮ್ಮನ ತಲೆಯನ್ನು ಶಿವಕುಮಾರ್​ ಎದೆಗೆ ಆನಿಸಿಕೊಂಡೇ ಪ್ರಯಾಣ ಬೆಳೆಸಿದ ದೃಶ್ಯ ಮನಕಲಕುವಂತಿತ್ತು.
ಇನ್ನು ರಾಜ್ಯಾದ್ಯಂತ ಲಾಕ್​ಡೌನ್​ ಜಾರಿಯಲ್ಲಿರುವುದರಿಂದ ಪೊಲೀಸರು ಅಲ್ಲಲ್ಲಿ ಆಟೋ ನಿಲ್ಲಿಸಿ ತಪಾಸಣೆ ಮಾಡಿದ್ದು, ಶಿವಕುಮಾರ್​ ಅಸಹಾಯಕತೆ ಕಂಡು ಅವರೂ ಮರುಗಿದ್ದಾರೆ. ಮಂಡ್ಯದಿಂದ ಮಳವಳ್ಳಿಗೆ ಪೊಲೀಸರೇ ಆಂಬುಲೆನ್ಸ್​ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 2 =
Remember me
