ಮೈಸೂರು:ಕರೊನಾ ಪಾಸಿಟಿವ್​ ಬಂದಿದ್ದಕ್ಕೆ ಮನನೊಂದ ಶಿಕ್ಷಕರೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆ ಕೆ.ಆರ್.ನಗರದ ಕೋಗಿಲೂರು ಗ್ರಾಮದ ಲೋಕೇಶ್ ಮೃತ ದುರ್ದೈವಿ. ಲೋಕೇಶ್​ಗೆ ಕಳೆದ ವರ್ಷ ಮದುವೆ ಆಗಿತ್ತು. ಇವರಿಗೆ ಇತ್ತೀಚಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಕುಟುಂಬಸ್ಥರು‌ ಆತ್ಮಸ್ಥೈರ್ಯ ತುಂಬಿದ್ದರು. ವಾರ್ ರೂಂನಿಂದ ಕರೆ‌ ಮಾಡಿ ಆತಂಕ ಪಡಬೇಡಿ ಎಂದು ತಿಳಿಸಿದ್ದರು.
ಆದರೂ ಲೋಕೇಶ್​ರಲ್ಲಿ ಭಯ ಕಡಿಮೆ ಆಗಿರಲಿಲ್ಲ ಎನ್ನಲಾಗಿದೆ. ಪತ್ನಿ‌ ಮನೆಗೆ ಹೋಗುವುದಾಗಿ ತನ್ನ ಮನೆಯಲ್ಲಿ ಹೇಳಿದ್ದ ಲೋಕೇಶ್, ಪತ್ನಿ ಮನೆ ಬಳಿ ಬೈಕ್ ನಿಲ್ಲಿಸಿ ಅಲ್ಲಿಯೇ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದರು. ಎರಡು ದಿನದ ಬಳಿಕ ಹಾಸನ ಜಿಲ್ಲೆಯ ಅರಕಲಗೂಡಿನ ಕೇರಳಪುರದ ಕಾವೇರಿ ನದಿಯಲ್ಲಿ ಇವರ ಶವ ಪತ್ತೆಯಾಗಿದೆ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ದಾಖಲಾಗಿದೆ.
ಒಂದೇ ಶಾಲೆಗೆ ಶಿಕ್ಷಕರಾಗಿದ್ದ ಅಣ್ಣ-ತಮ್ಮ ಇಬ್ಬರೂ ಕರೊನಾಗೆ ಬಲಿ! ಮನಕಲಕುತ್ತೆ ಕುಟುಂಬಸ್ಥರ ಆಕ್ರಂದನ

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ಕರೊನಾ ಪಾಸಿಟಿವ್​ ಬಂದರೂ ಮದ್ವೆ ಮನೆಗೆ ಬಂದ ವಕೀಲ! ಪ್ರಶ್ನಿಸಿದ್ದಕ್ಕೆ ಉಡಾಫೆ, ಮುಂದೆ ಆಗಿದ್ದೆಲ್ಲವೂ ಅವಾಂತರ

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ರೈತರೇ ಲಾಕ್​ಡೌನ್​ ಚಿಂತೆ ಬಿಡಿ, ನಿಮ್ಮ ಬೆಳೆಗೆ ಸೂಕ್ತ ಬೆಲೆಕೊಟ್ಟು ಖರೀದಿಸುವೆ, ಈ ನಂಬರ್​ಗೆ ಕರೆ ಮಾಡಿ: ನಟ ಉಪೇಂದ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + twenty =
Remember me
