ಮಂಗಳೂರು:ಕರೊನಾ ಪಾಸಿಟಿವ್ ಬಂದರೂ ಮದುವೆ ಕಾರ್ಯಕ್ರಮಕ್ಕೆ ಹಾಜರಾದ ವಕೀಲನ ವಿರುದ್ಧ ಎಫ್​ಐಆರ್​ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿನಾಲ್ಕೂರು ಗ್ರಾಮದ ರಾಜೇಶ್ ಪೂಜಾರಿ ಎಂಬುವರು ಮೇ 10ರಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೊನಾ ಟೆಸ್ಟ್​ ಮಾಡಿಸಿದ್ದು, ಸೋಂಕು ದೃಢಪಟ್ಟಿತ್ತು. ಹಾಗಾಗಿ ಮೇ 11ರಂದು ರಾಜೇಶ್ ಮನೆಗೆ ತೆರಳಿದ ಆಶಾ ಕಾರ್ಯಕರ್ತೆಯರು ಕ್ವಾರಂಟೈನ್​ ಆಗುವಂತೆ ಸೂಚಿಸಿದ್ದರು. ಮೇ 13ರಂದು ಮತ್ತೆ ಅವರ ಮನೆಗೆ ಗ್ರಾಪಂ ಸಿಬ್ಬಂದಿ ತೆರಳಿದಾಗ ರಾಜೇಶ್ ಅಲ್ಲಿರಲಿಲ್ಲ. ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿದಾಗ ರಾಜೇಶ್​ ಕಾರ್ಕಳದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿರುವ ವಿಚಾರ ಗೊತ್ತಾಗಿದೆ.
ಕೂಡಲೇ ರಾಜೇಶ್​ಗೆ ಕರೆ ಮಾಡಿ ಮಾತನಾಡಿದಾಗ, ತಾನು ಖಾಸಗಿ ಆಸ್ಪತ್ರೆಯಲ್ಲಿ ಮತ್ತೆ ಟೆಸ್ಟ್ ಮಾಡಿಸಿದೆ. ವರದಿ ನೆಗೆಟಿವ್​ ಬಂದಿದೆ. ಮತ್ತೇಕೆ ಕ್ವಾರಂಟೈನ್​ ಆಗಬೇಕು ಎಂದು ರಾಜೇಶ್​ ಉಡಾಫೆಯಿಂದ ವರ್ತಿಸಿದ್ದಾರೆ. ಈ ಸಂಬಂಧ ಗ್ರಾಮ ಪಂಚಾಯಿತಿ ಪಿಡಿಒ ವಸಂತಿ ಅವರು ರಾಜೇಶ್​ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ‌ಪ್ರಕರಣ ದಾಖಲಿಸಿದ್ದಾರೆ.
ಒಮ್ಮೆ ಕರೊನಾ ಪಾಸಿಟಿವ್​ ಎಂದು ಬಂದರೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಆ ವ್ಯಕ್ತಿ 14 ದಿನ, ಪ್ರಾಥಮಿಕ ಸಂಪರ್ಕದಲ್ಲಿದ್ದವರು 7 ದಿನ ಕ್ವಾರಂಟೈನ್​ ಆಗಬೇಕಿದೆ. ಆದರೆ ರಾಜೇಶ್​ ಕೋವಿಡ್​ ನಿಯಮ ಉಲ್ಲಂಘಿಸಿ ಮದುವೆಗೆ ಹೋಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ವಿವರಿಸಲಾಗಿದೆ.
ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಪ್ರಿಯಕರನಿಗಾಗಿ ವಿಷ ಕುಡಿದು ಬದುಕಿದ ಪ್ರೇಯಸಿಯನ್ನ ರಾತ್ರೋರಾತ್ರಿ ಸುಟ್ಟುಹಾಕಿದ್ರು! ಬೆಚ್ಚಿಬೀಳಿಸುತ್ತೆ ಮರ್ಯಾದಾ ಹತ್ಯೆ

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
