ಕಲಬುರಗಿ:ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಕಾರು ಜಪ್ತಿ ಮಾಡುವಂತೆ ಕೋರ್ಟ್​ ಆದೇಶಿಸಿದೆ.
ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯ ಸರ್ಕಾರಿ ಕಾರನ್ನು ಜಪ್ತಿ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಬಂದ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು, ಕಾರಿನ ಮೇಲೆ ನೋಟಿಸ್​ ಅಂಟಿಸಿದರು.
ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆ ಅವರಿಗೆ ಪರಿಹಾರ ನೀಡದೆ ವಿಳಂಬ ಮಾಡಿದ್ದ ಜಿಲ್ಲಾಧಿಕಾರಿಗೆ ಕೋರ್ಟ್​ ಬಿಸಿ ಮುಟ್ಟಿಸಿದೆ.

ರೈತ ಕಲ್ಲಪ್ಪ ಮೇತ್ರೆ ಅವರ 33 ಗುಂಟೆ ಜಮೀನು 2008ರಲ್ಲಿ ಭೀಮಾ‌ ಏತನಿರಾವರಿ ಯೋಜನೆಯಡಿ ಮುಳುಗಡೆಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ 7,39,632 ರೂಪಾಯಿ ಪರಿಹಾರ ನೀಡವಂತೆ ಕೋರ್ಟ್ ಆದೇಶಿಸಿತ್ತು. ಆದರೂ ಪರಿಹಾರ ನೀಡದೆ ಜಿಲ್ಲಾಡಳಿತ ಸತಾಯಿಸಿತ್ತು. ಈ ಸಂಬಂಧ ಗರಂ ಆದ ಕೋರ್ಟ್, ಡಿಸಿ ಕಾರನ್ನೇ ಜ್ಪತಿ ಮಾಡುವಂತೆ ಆದೇಶಿಸಿದೆ.
ಲೋಕ ರಕ್ಷಿಸುವ ಮಾಯೆ ನಾನು, ನಿಮ್ಮನ್ನು ಕಾಪಾಡುವೆ… ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ

ಸೂರಿಲ್ಲದೆ ಅಂಬೇಡ್ಕರ್​ ಭವನದಲ್ಲಿ ತಂಗಿದ್ದೇ ತಪ್ಪಾ? ಬಡ ವೃದ್ಧೆಯ ಪ್ರಾಣ ತೆಗೆದ ಗ್ರಾಪಂ ಸದಸ್ಯನ ಮಗ! ಮೈಸೂರಲ್ಲಿ ಅಮಾನವೀಯ ಘಟನೆ

ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + twenty =
Remember me
