ಬೆಂಗಳೂರು:ನಟ ದರ್ಶನ್ ಹೆಸರಲ್ಲಿ ಹಣ ವಂಚನೆ ಯತ್ನ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ನಿರ್ಮಾಪಕ ಉಮಾಪತಿ ಮೇಲೆ ಅನುಮಾನ ಮೂಡಿತ್ತಾದರೂ ನಂತರದ ಬೆಳವಣಿಗೆಯಲ್ಲಿ ಈ ಪ್ರಕರಣದ ಪ್ರಮುಖ ಕೇಂದ್ರಬಿಂದು ಆರೋಪಿ ಅರುಣಾಕುಮಾರಿ ಎನ್ನಲಾಗುತ್ತಿದೆ. ಇದೀಗ ನಟ ದರ್ಶನ್​ ಕೂಡ ‘ಈ ಕೇಸ್​ಗೆ ಈಗಾಗಲೇ ಮಂಗಳ ಹಾಡಿ ಆಗಿದೆ’ ಎನ್ನುವ ಮೂಲಕ ನಿರ್ಮಾಪಕ ಉಮಾಪತಿಯನ್ನು ಬಿಟ್ಟುಕೊಟ್ಟಿಲ್ಲ.
‘ನಿರ್ಮಾಪಕರನ್ನು ನಾನು ಬಿಟ್ಟು ಕೊಡುವುದಿಲ್ಲ. ಉಮಾಪತಿ ಇವತ್ತಿಗೂ ನಮ್ಮ ನಿರ್ಮಾಪಕರೇ. ನಾನು ಉಮಾಪತಿ ಜತೆ ಮಾತನಾಡಿದ್ದೇನೆ. ಇದೇನು ಮಕ್ಕಳ ಆಟವಲ್ಲ…’ ಎನ್ನುವ ಮೂಲಕ ಉಮಾಪತಿ ಪರ ದರ್ಶನ್​ ಮಾತನಾಡಿದ್ದಾರೆ.
‘ಇದರಲ್ಲಿ ನಿರ್ಮಾಪಕ ಉಮಾಪತಿಯ ಪಾತ್ರ ಏನೂ ಇಲ್ಲ. ಇದರ ಹಿಂದೆ ಬೇರೆ ಯಾರೋ ಇದ್ದಾರೆ. ಯಾವ ಹೆಣ್ಣು ಮಕ್ಕಳೂ ಇಂಥ ಕೆಲಸ ಮಾಡಲು ಬರಲ್ಲ. ಉಮಾಪತಿಯನ್ನು ಏಕೆ ಟಾರ್ಗೆಟ್ ಮಾಡುತ್ತೀರಿ. ಈ ವಿಷಯದಲ್ಲಿ ಇಲ್ಲಿ ಯಾರೂ ಕೈ ಕಟ್ಟಿ ಕೂತಿಲ್ಲ. ಆ ಮಹಿಳೆಗೆ ಇಷ್ಟೊಂದು ಧೈರ್ಯ ಎಲ್ಲಿಂದ ಬಂತು?’ ಎಂದು ಪ್ರಶ್ನಿಸಿದರು.
ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಅಪ್ಪನ ಪಾರ್ಥಿವ ಶರೀರವನ್ನು ಸೇನಾ ಸಮವಸ್ತ್ರ ಹಾಕಿಕೊಂಡು ಸ್ವೀಕರಿಸಿದ ಮಗ!

ಪ್ರಿಯಕರನ ಮನೆಯಲ್ಲಿ ಯುವತಿ ಶವ ಪತ್ತೆ! ಮೃತಳ ಪೋಷಕರಿಂದ ನಡೆದೇ ಹೋಯ್ತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − five =
Remember me
