ಬೆಂಗಳೂರು:ನಗರದ ಬನಶಂಕರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ದಂತ ವೈದ್ಯೆ ಮತ್ತು ಇವರ ಪುತ್ರಿಯ ಶವಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.
ವಿರಾಜಪೇಟೆ ಮೂಲದ ಡಾ. ಶೈಮಾ ಮುತ್ತಪ್ಪ(39) ಮತ್ತು ಇವರ ಮಗಳು ಆರಾಧನಾ(10) ಮೃತ ದುರ್ದೈವಿಗಳು. ಶನಿವಾರ ಈ ಘಟನೆ ನಡೆಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೈಮಾರ ಪತಿ ನಾರಾಯಣ್ ಕೂಡ ಡೆಂಟಲ್​ ಡಾಕ್ಟರ್. ಇವರಿಬ್ಬರೂ ಓದುವಾಗಲೇ ಪರಸ್ಪರ ಪ್ರೀತಿಸುತ್ತಿದ್ದರು.
ಪ್ರೀತಿ ವಿಚಾರ ಕುಟುಂಬಕ್ಕೆ ತಿಳಿದ ಸಂದರ್ಭದಲ್ಲೇ ಶೈಮಾರ ತಾಯಿ ಮೃತಪಟ್ಟಿದ್ದರು. ನಂತರ ಕುಟುಂಬಗಳನ್ನು ಒಪ್ಪಿಸಿ ಇಬ್ಬರೂ 10 ವರ್ಷದ ಹಿಂದೆ ಮದುವೆ ಆಗಿದ್ದರು. ಡೆಂಟಲ್​ ಕ್ಲಿನಿಕ್​ ಕೂಡ ನಡೆಸುತ್ತಿದ್ದರು. ದಂಪತಿಗೆ ಮಗು ಕೂಡ ಇತ್ತು.
ಎಂದಿನಂತೆ ಶನಿವಾರ ಬೆಳಗ್ಗೆ ಡಾ.ನಾರಾಯಣ್ ಅವರು ಕ್ಲಿನಿಕ್​ಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೈಮಾ ಮತ್ತು ಮಗು ಮೃತಪಟ್ಟಿದ್ದಾರೆ. ಘಟನೆ ವೇಳೆ ಶೈಮಾರ ಸಹೋದರ ಆಸ್ಟ್ರೇಲಿಯಾದಲ್ಲಿದ್ದರು. ಇಂದು(ಸೋಮವಾರ) ಸಹೋದರ ಬಂದು ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಾವಿನ ಬಗ್ಗೆ ಸೈಮಾರ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಗುವನ್ನು ನೇಣು ಹಾಕಿ, ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ.
ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು

ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ತಂದೆಯ ಹೇಳಿಕೆ ಕೇಳಿದ್ರೆ ಮನಸ್ಸು ಭಾರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
