ದಾವಣಗೆರೆ:ಎರಡೂವರೆ ವರ್ಷದ ಹಿಂದೆ ಕಲಬುರಗಿಯಲ್ಲಿ ಸಿವಿಲ್​ ಇಂಜಿನಿಯರ್​ ಜತೆ ದಾಂಪತ್ಯಕ್ಕೆ ಕಾಲಿಟ್ಟಿದ್ದ 21 ವರ್ಷದ ಯುವತಿ ರಚಿತಾ ಇದೇ ಜೂನ್​ 8ರಂದು ನೇಣಿಗೆ ಶರಣಾಗಿದ್ದಳು. ಕುಣಿಗಲ್ ತಾಲೂಕಿನ ಕಾವೇರಿಪುರದ ನಿವಾಸಿ ನಾಗರಾಜು ಜತೆ ಮದುವೆ ಆಗಿದ್ದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೊಂಡ್ಲು ಗ್ರಾಮದ ಐಶ್ವರ್ಯ ತುಮಕೂರಿನ ಬಾಡಿಗೆ ಮನೆಯಲ್ಲಿ ಅದೇ ದಿನ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಇಬ್ಬರೂ ಬಲಿಯಾಗಿದ್ದು ವರದಕ್ಷಿಣೆ ದಾಹಕ್ಕೆ. ಈ ಸಾವಿನ ಸರಣಿ ಮುಂದುವರಿದಿದ್ದು, ಇದೀಗ 6 ತಿಂಗಳ ಹಿಂದೆ ನೂರಾರು ಕನಸುಗಳ ಬುತ್ತಿಯೊಂದಿಗೆ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು ಕಂಡಿದ್ದಾಳೆ.
ದಾವಣಗೆರೆ ತಾಲೂಕಿನ ಹನುಮನಹಳ್ಳಿ ಗ್ರಾಮದ ಜಯಪ್ರಕಾಶ ಅವರ ಪತ್ನಿ ಎಸ್.ಎಂ. ರೂಪಾ (25) ಮೃತ ದುರ್ದೈವಿ. ಹೊಸ ಕುಂದವಾಡ ಮೂಲದ ರೂಪಾಗೆ ಜಯಪ್ರಕಾಶನ ಜತೆ ಆಕೆಯ ಕುಟುಂಬಸ್ಥರು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆ ವೇಳೆ ಒಂದೂವರೆ ಲಕ್ಷ ರೂಪಾಯಿ ನಗದು, 9 ತೊಲ ಚಿನ್ನಾಭರಣವನ್ನೂ ನೀಡಲಾಗಿತ್ತು.
ಆದರೆ, ನಿನ್ನೆ(ಜೂ.29) ಬೆಳಗ್ಗೆ ರೂಪಾಳ ಶವ ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿತಿಯಲ್ಲಿ ಪತ್ತೆಯಾಗಿದೆ. ವರದಕ್ಷಿಣೆ ತರುವಂತೆ ಗಂಡನ ಮನೆಯಲ್ಲಿ ನಿತ್ಯ ದೈಹಿಕ ಹಾಗೂ‌ ಮಾನಸಿಕ‌ ಹಿಂಸೆ ಕೊಡಲಾಗುತ್ತಿತ್ತು. ಗಂಡನ ಚಿತ್ರಹಿಂಸೆ ತಾಳಲಾರದೇ ರೂಪಾ ಸಾವಿನ ಮನೆಯ ಕದತಟ್ಟಿದ್ದಾಳೆ ಎನ್ನಲಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ಗಂಡ ನಾಪತ್ತೆಯಾದ್ದು, ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಮೃತಳ ಪಾಲಕರು ಮಾಯಕೊಂಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ವರದಕ್ಷಿಣೆ ಕಿರುಕುಳ: ಮದ್ವೆಯಾದ ಒಂದೇ ವರ್ಷಕ್ಕೆ ದುರಂತ ಅಂತ್ಯ ಕಂಡ 19 ವರ್ಷದ ಯುವತಿ!

ವರದಕ್ಷಿಣೆ ದಾಹಕ್ಕೆ ಸಿವಿಲ್ ಇಂಜಿನಿಯರ್ ಪತ್ನಿ ಬಲಿ! ಮದ್ವೆ ಆದ ದಿನದಿಂದ ಗಂಡ ಕೊಟ್ಟ ಕಿರುಕುಳ ಅಷ್ಟಿಷ್ಟಲ್ಲ

ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − nine =
Remember me
