ಶಿವಮೊಗ್ಗ:ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ನಲುಗಿದ ಮಹಿಳೆಯೊಬ್ಬರು 4 ವರ್ಷದ ಮಗನ ಜತೆ ಸಾವಿನ ಮನೆಯ ಕದ ತಟ್ಟಿದ್ದಾರೆ.
ಕಪ್ಪಗಳಲೆ ಗ್ರಾಮದ ಶರತ್ ಎಂಬುವರ ಪತ್ನಿ ನಯನ(27) ಮತ್ತು ಮಗ ಗುರುರಾಜ(4) ಮೃತ ದುರ್ದೈವಿಗಳು. 5 ವರ್ಷದ ಹಿಂದೆ ಶರತ್ ಮತ್ತು ನಯನಾ ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇತ್ತೀಚಿಗೆ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು.
ಪ್ರೀತಿಸಿ ಮದುವೆಯಾದ ದಂಪತಿಗೆ ಮುದ್ದಾದ ಮಗು ಇತ್ತು. ಸಂಸಾರ ಚೆನ್ನಾಗಿಯೇ ನಡೆಯುತ್ತಿದೆ ಎನ್ನುವಾಗ ವರದಕ್ಷಿಣೆ ಎಂಬ ಭೂತ ಗಂಡನಿಗೆ ಹೊಕ್ಕಿತ್ತು ಎನ್ನಲಾಗಿದೆ.
ಇದೇ ವಿಚಾರಕ್ಕೆ ಪತ್ನಿ ಜತೆ ಪದೇಪದೆ ಜಗಳ ತೆಗೆಯುತ್ತಿದ್ದನಂತೆ. ಮನನೊಂದ ನಯನ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗನಿಗೆ ನೇಣುಬಿಗಿದು, ಬಳಿಕ ತಾನೂ ನೇಣಿಗೆ ಶರಣಾಗಿದ್ದಾಳೆ. ಮಗಳು ಮತ್ತು ಮೊಮ್ಮಗನ ಸಾವಿಂದ ಕಂಗೆಟ್ಟ ನಯನಾಳ ತಂದೆ ನಾಗರಾಜ್, ಸೊರಬ ಪೊಲೀಸ್ ಠಾಣೆ ದೂರು ನೀಡಿದ್ದಾರೆ.
ಮಲ್ಪೆ ಕಡಲ ತೀರದಲ್ಲಿ ಬೀಳುತ್ತಿದೆ ಚಿನ್ನ! ಕಸದ ರಾಶಿಯಲ್ಲಿ ಬಂಗಾರದ ಬೇಟೆಗೆ ಮುಗಿಬಿದ್ದ ಜನ

ತಾವರೆ ಎಲೆಯಲ್ಲಿ ಊಟ ಸವಿದ ಶಾಸಕ, ಮಾಜಿ ಎಂಎಲ್ಸಿ! ಆಬಲವಾಡಿಗೆ ಆಗಮಿಸಿದ ಸಹಸ್ರಾರು ಭಕ್ತರು

ಬೈಕ್​ ಸ್ಕಿಡ್​ ಆಗಿ ವಿದ್ಯಾರ್ಥಿಗಳಿಬ್ಬರ ಸಾವು: ರಜೆ ಹಿನ್ನೆಲೆ ಮುರುಡೇಶ್ವರಕ್ಕೆ ತೆರಳುವಾಗ ಅವಘಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + fourteen =
Remember me
