ಕೊಡಗು:ಮಡಿಕೇರಿ ತಾಲೂಕಿನ ಹಲವೆಡೆ ಮಂಗಳವಾರ ಬೆಳಗ್ಗೆ 7.45ಕ್ಕೆ ಲಘು ಭೂಕಂಪನ ಸಂಭವಿಸಿದ್ದು, ಇದರ ಪ್ರಭಾವ ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ಜನತೆ ಬೆಚ್ಚಿಬಿದ್ದಿದ್ದಾರೆ.
ಲಘು ಭೂಕಂಪನ ಕುರಿತು ಕರ್ನಾಟಕ ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ಅಧಿಕೃತ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಇದರ ಪ್ರಕಾರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಸಮೀಪ ಭೂಕಂಪನ ಉಂಟಾಗಿದ್ದು ರಿಕ್ಟರ್ ಸ್ಕೇಲ್‌ನಲ್ಲಿ ಭೂಕಂಪನದ ತೀವ್ರತೆ 3.0 ದಾಖಲಾಗಿದೆ.
ಮಂಗಳವಾರ ಬೆಳಗ್ಗೆ 7 ಗಂಟೆ 45 ನಿಮಿಷ 47 ಸೆಕೆಂಡಿಗೆ ಈ ಭೂಕಂಪನ ದಾಖಲಾಗಿದೆ. 5.2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಭೂಕಂಪನ ಸಂಭವಿಸಿದ್ದು, ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಹಾಗೂ ಕೊಡಗು ಜಿಲ್ಲೆಯ ಕೊಡಗು ಸಂಪಾಜೆ, ಚೆಂಬು, ಕರಿಕೆ, ಪೆರಾಜೆ ಪ್ರದೇಶ ಸೇರಿ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ವರದಿ ತಿಳಿಸಿದೆ. ಎರಡು ದಿನದ ಹಿಂದೆ ಸಂಭವಿಸಿದ ಭೂಕಂಪನಕ್ಕಿಂತ ಹೆಚ್ಚು ತೀವ್ರತೆಯ ಭೂಕಂಪನ ಇದಾಗಿದೆ. ಜೂ.25ರಂದು ಸಂಭವಿಸಿದ ಭೂಕಂಪನ ಕರಿಕೆ ಸಮೀಪದಲ್ಲಿ ಸಂಭವಿಸಿದ್ದು, ರಿಕ್ಟರ್ ಸ್ಕೇಲ್‌ನಲ್ಲಿ 2.3 ದಾಖಲಾಗಿತ್ತು.
ಮೈಸೂರಲ್ಲಿ 2ನೇ ಪತ್ನಿಯ ರುಂಡ-ಮುಂಡ ಕತ್ತರಿಸಿ ಭೀಕರ ಕೊಲೆ! ತಂದೆಯ ಕರಾಳ ಮುಖ ಬಿಚ್ಚಿಟ್ಟ 20 ವರ್ಷದ ಮಗಳು

ಟಿ.ನರಸೀಪುರದಲ್ಲಿ ತಾಯಿ-ಮಕ್ಕಳ ದುರಂತ ಅಂತ್ಯ: ಬಾಳಿ ಬದುಕಬೇಕಿದ್ದವರನ್ನ ಸಾವಿನಕೂಪಕ್ಕೆ ದೂಡಿದ್ದೇನು?

ಏಕಾಏಕಿ ವಾಹನ ತಡೆಯಂಗಿಲ್ಲ, ಟ್ರಾಫಿಕ್​ ಪೊಲೀಸರಿಗೆ DGP ಖಡಕ್​​ ಸೂಚನೆ: ಎಎಸ್​ಐ-ಮುಖ್ಯಪೇದೆ ಅಮಾನತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 9 =
Remember me
