ಬೆಂಗಳೂರು:ಶಿಕ್ಷಣ ಬೇಕಾದರೆ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶವೇ ಇಲ್ಲ ಎಂದು ಶಿಕ್ಷಣ ಸಚಿವ ಬಿ‌.ಸಿ.ನಾಗೇಶ್ ಎಚ್ಚರಿಸಿದ್ದಾರೆ.
ಹಿಜಾಬ್​ ವಿವಾದ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ನಾಗೇಶ್​, ಧರ್ಮ ಪಾಲನೆಗೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಹೈಕೋರ್ಟ್‌ ನೀಡುವ ತೀರ್ಪು ಆಧರಿಸಿ ಹೊಸ ನಿಯಮಗಳನ್ನು ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ ಎಂದರು.
ದೇಶದ ಸಮಗ್ರತೆ ಹಾಳು ಮಾಡಲು ಪಿತೂರಿ ನಡೆಯುತ್ತಿದೆ. ಹಿಜಾಬ್‌ ವಿವಾದ ಬಳಸಿ ಘರ್ಷಣೆ ಸೃಷ್ಟಿಸುವ ಹುನ್ನಾರವೂ ನಡೆದಿದೆ ಎಂದು ಶಿಕ್ಷಣ ಸಚಿವ ನಾಗೇಶ್​ ಅಸಮಾಧಾನ ಹೊರಹಾಕಿದರು.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಶಿಕ್ಷಣ ಸಚಿವರು, ರಾಜಕೀಯ ಕ್ಷೇತ್ರವನ್ನು ಹಾಳು ಮಾಡಿ ಆಗಿದೆ. ದಯವಿಟ್ಟು ಶಿಕ್ಷಣ ಕ್ಷೇತ್ರವನ್ನೂ ಹಾಳು ಮಾಡಬೇಡಿ. ಬಾಯಿಗೆ ಬಂದಂತೆ ಮಾತನಾಡಲು ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಶಾಲೆ ಸೂಚಿಸಿದ ಯೂನಿಫಾರ್ಮ್ ಧರಿಸುತ್ತೇವೆ ಎಂದು ಮಕ್ಕಳೇ ಬರೆದುಕೊಟ್ಟಿದ್ದಾರೆ. 95 ಮಕ್ಕಳ ಪೈಕಿ 6 ಮಕ್ಕಳು ಮಾತ್ರ ಹಿಜಾಬ್ ಧರಿಸಿದ್ದಾರೆ. ಒಬ್ಬ ಲಾಯರ್ ಆಗಿ ರೂಲ್ ಬುಕ್ ಓದಿ ಸಿದ್ದರಾಮಯ್ಯನವರೇ. ನಾವೆಲ್ಲರೂ ಒಂದೇ ಎನ್ನಲು ಅವಕಾಶ ಮಾಡಿಕೊಡಿ ಎಂದರು.
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಕಾಲೇಜು ಆಡಳಿತ ಮಂಡಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
