ಕೊಪ್ಪಳ:ಗೊಬ್ಬರಕ್ಕಾಗಿ ಕಾದು ಸುಸ್ತಾದ ರೈತರು, ಸರತಿಯಲ್ಲಿ‌ ತಮ್ಮ ಬದಲು ಪಾದರಕ್ಷೆ, ಕಲ್ಲು, ಕಟ್ಟಿಗೆ, ಇಟ್ಟಿಗೆ ಇಟ್ಟು ತುಸು ಸಮೀಪವೇ ಅಲ್ಲಲ್ಲಿ ಕೂತು ಕಾಯುತ್ತಿದ್ದಾರೆ.
ಇದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಅವರ ತವರೂರು ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಪರಿಸ್ಥಿತಿ. ಕೊಪ್ಪಳ ಜಿಲ್ಲೆಯಲ್ಲಿ ಗೊಬ್ಬರಕ್ಕಾಗಿ ರೈತರ ಪರದಾಟ ಮುಂದುವರಿದಿದೆ.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಬಿಟ್ಟಿದ್ದು, ಗಂಗಾವತಿ ಭಾಗದಲ್ಲಿ ಭತ್ತ ನಾಟಿ ಆರಂಭವಾಗಿದೆ. ಹೀಗಾಗಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಇತ್ತ ಒಣ ಬೇಸಾಯ ಆಧಾರಿತ ಪ್ರದೇಶದಲ್ಲೂ ಬಿತ್ತನೆ ಚುರುಕು ಪಡೆದಿದೆ. ಬೇಡಿಕೆ ಅಧಿಕವಾಗಿದ್ದು ಪೂರೈಕೆ ಕೊರತೆಯಾಗಿದೆ. ಅಧಿಕಾರಿಗಳು ಕಾಗದದಲ್ಲಿ ಗೊಬ್ಬರ ಇದೆ ಎಂದು ತೋರಿಸುತ್ತಿದ್ದಾರೆ.
ಸಚಿವರು, ಶಾಸಕರು ಗೊಬ್ಬರ ಕೊರತೆಯಿಲ್ಲ ಎಂದು ಸಬೂಬು ನೀಡುತ್ತಿದ್ದಾರೆ. ವಾಸ್ತವವಾಗಿ ಗೊಬ್ಬರ ಸ್ಟಾಕ್ ಇಲ್ಲ. ಹೀಗಾಗಿ ರೈತರ ಪರದಾಟದ ಫೋಟೋ ತೆಗೆದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಜಿಲ್ಲಾ ಕೇಂದ್ರ ಕೊಪ್ಪಳದಲ್ಲೂ ಗೊಬ್ಬರಕ್ಕಾಗಿ ರೈತರು ಮುಗಿಬಿದ್ದಿದ್ದಾರೆ. ಟಿಎಪಿಎಸ್ಎಂಎಸ್ ಮುಂಭಾಗದಲ್ಲಿ ಕಿಲೋ ಮೀಟರ್​ಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಬೆಳಗ್ಗೆ ಅಂಗಡಿ ತೆರೆದ ಕೆಲ ಗಂಟೆಗಳಲ್ಲೇ ಯೂರಿಯಾ ಖಾಲಿಯಾಗುತ್ತಿದೆ. ಇಂದು(ಸೋಮವಾರ) ಗೊಬ್ಬರ ಬಂದಿದ್ದು, ಅಂಗಡಿ ತೆರೆಯುವ ಮುನ್ನವೇ ನೂರಾರು ರೈತರು ಜಮಾಯಿಸಿದ್ದಾರೆ.
ಸಿದ್ದರಾಮೋತ್ಸವ ಹಿನ್ನೆಲೆ ಲಾಡ್ಜ್‌, ಹೋಟೆಲ್​, ರೆಸ್ಟೋರೆಂಟ್‌ಗಳು ಹೌಸ್‌ಫುಲ್! ಕೋಟ್ಯಂತರ ರೂಪಾಯಿ ವಹಿವಾಟು…

ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + nine =
Remember me
