ತುಮಕೂರು:ಯೂಕ್ರೇನ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ ತುಮಕೂರು ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ ಬಳಿಕ ಅವರ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗದಂತೆ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯವು ಅವಕಾಶ ಕಲ್ಪಿಸಿದೆ.
ಒಟ್ಟು 27 ವಿದ್ಯಾರ್ಥಿಗಳು ಯುದ್ಧಾತಂಕದ ಬಳಿಕ ಭಾರತಕ್ಕೆ ಮರಳಿದ್ದರು. ಈ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆತಂಕದ ಕಾರ್ಮೋಡ ಕವಿದಿರುವ ಸಂದರ್ಭದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ನೆರವಿಗೆ ಧಾವಿಸಿದ್ದಾರೆ. ಮಠದ ಕಾಲೇಜಿನಲ್ಲಿ 16 ವಿದ್ಯಾಥಿರ್ಗಳಿಗೆ ಪ್ರಾಯೋಗಿಕ ತರಗತಿ, ಗ್ರಂಥಾಲಯ ಸೇರಿದಂತೆ ಅಗತ್ಯ ನೆರವು ನೀಡಿ ಕ್ಲಿನಿಕಲ್​ ಸಪೋರ್ಟ್​ ಸಿಗುವಂತೆ ಮಾಡಲಾಗಿದೆ. ಸದ್ಯ ವೈದ್ಯಕೀಯ ಕೋರ್ಸ್​ಗೆ ಪೂರಕ ಹಾಗೂ ಬೆಂಬಲವಾಗಿ ಕಾಲೇಜು ಸಿಬ್ಬಂದಿ ನಿಂತಿದ್ದಾರೆ. ಈ ಮಕ್ಕಳ ಮುಂದಿನ ವೈದ್ಯಕೀಯ ಪರೀಕ್ಷೆಗಳ ಬಗ್ಗೆ ಸರ್ಕಾರವೇ ನಿರ್ಧರಿಸಲಿದೆ.
ಯೂಕ್ರೇನ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆತಂದಿದ್ದು ಅವರ ವಿದ್ಯಾಭ್ಯಾಸ ಮೊಟಕಾಗಬಾರದು ಎನ್ನುವ ಉದ್ದೇಶದಿಂದ ಕಾಲೇಜಿನಲ್ಲಿ ಶಿಕ್ಷಣ ಮುಂದುವರಿಸಲು ಅವಕಾಶ ನೀಡಲಾಗಿದೆ ಎಂದು ಸಿದ್ದಲಿಂಗ ಶ್ರೀಗಳುವಿಜಯವಾಣಿಗೆ ಮಾಹಿತಿ ನೀಡಿದ್ದಾರೆ.

ನಮ್ಮ ಜಿಲ್ಲೆಯಿಂದ ಒಟ್ಟು 27 ವಿದ್ಯಾರ್ಥಿಗಳು ಯೂಕ್ರೇನ್​ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು, ಅದರಲ್ಲಿ ನಮ್ಮಲ್ಲಿಗೆ ಬಂದಿರುವ 16 ವಿದ್ಯಾರ್ಥಿಗಳಿಗೆ ಸದ್ಯ ಪ್ರಾಯೋಗಿಕ ತರಗತಿ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ವೆಚ್ಚ ಪಡೆಯದೆ ಉಚಿತ ಶಿಕ್ಷಣ ನೀಡುತ್ತಿದ್ದೇವೆ. ಯೂಕ್ರೇನ್​ನಿಂದ ಆನ್​ಲೈನ್​ ತರಗತಿಗಳ ಮೂಲಕ ಬೋಧನೆ ಮಾಡುತ್ತಿದ್ದು ನಮ್ಮ ಆಸ್ಪತ್ರೆಯಲ್ಲಿ ಪ್ರಾಕ್ಟಿಕಲ್​ ತರಬೇತಿ ಪಡೆಯುತ್ತಿದ್ದಾರೆ ಎಂದು ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಎಸ್​.ಪರಮೇಶ್​ ತಿಳಿಸಿದರು.
ಯುದ್ಧಭೀತಿ ನಮ್ಮನ್ನು ಕಾಡುತ್ತಿದೆ. ಈ ಸಂದರ್ಭದಲ್ಲಿ ಸಿದ್ಧಗಂಗಾ ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರವು ನಮಗೆ ಮಾನಸಿಕ ಧೈರ್ಯ ತುಂಬಿ, ಗೊಂದಲಗಳನ್ನು ಬಗೆಹರಿಸಿ ವೈದ್ಯಕೀಯ ತರಬೇತಿ ಮುಂದುವರಿಸಲು ಅವಕಾಶ ನೀಡುತ್ತಿದೆ. ಇಲ್ಲಿನ ವೈದ್ಯರು ರೋಗಿಗಳ ಸಂದರ್ಶನ, ಶಸ್ತ್ರಚಿಕಿತ್ಸಾ ಕೊಠಡಿಗಳಲ್ಲಿ ಅತ್ಯುತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ. ನಮ್ಮ ಮುಂದಿನ ಭವಿಷ್ಯದ ಬಗ್ಗೆ ಯೂಕ್ರೇನ್​ ಹಾಗೂ ಭಾರತ ಸರ್ಕಾರದ ನಿರ್ಧಾರವನ್ನು ಎದುರು ನೋಡುತ್ತಿದ್ದೇವೆ.| ರೂಪಶ್ರೀಎಂಬಿಬಿಎಸ್​ ವಿದ್ಯಾರ್ಥಿನಿ
IFS​ ಅಧಿಕಾರಿ ಶ್ರೀನಿವಾಸ್​ಗೆ ಭಾವನಾತ್ಮಕ ಗೌರವ! ವೀರಪ್ಪನ್​ ವಿರುದ್ಧದ ಕಾರ್ಯಾಚರಣೆಯಲ್ಲಿ ಬಳಸಿದ್ದ ಜೀಪು ಈಗ ‘ಸ್ಮಾರಕ’

ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 18 =
Remember me
