ಬೆಂಗಳೂರು:ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್​.ಎಸ್​. ದೊರೆಸ್ವಾಮಿ(104) ಅವರು ಬುಧವಾರ ಮಧ್ಯಾಹ್ನ 1.30ಕ್ಕೆ ನಿಧನರಾದರು.
ಹೃದಯ ಸಮಸ್ಯೆ ಹೊಂದಿದ್ದ ದೊರೆಸ್ವಾಮಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯ ಸಮಸ್ಯೆ ಜತೆಗೆ ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ (ಶ್ವಾಸನಾಳದಲ್ಲಿ ಉರಿಯೂತ) ಸೇರಿದಂತೆ ವಯೋಸಹಜ ಸಮಸ್ಯೆಗಳನ್ನು ಹೊಂದಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಕೊನೆಯುಸಿರೆಳೆದರು.
ಕೆಲದಿನಗಳ ಹಿಂದೆ ಹೃದಯ ಸಮಸ್ಯೆಯಿಂದ (ಮೇ 6-12ರವರೆಗೆ) ಜಯದೇವ ಆಸ್ಪತ್ರೆಯಲ್ಲಿ ದೊರೆಸ್ವಾಮಿ ಚಿಕಿತ್ಸೆ ಪಡೆದಿದ್ದರು. ಆ ವೇಳೆ ಅವರಿಗೆ ಜ್ವರ, ನೆಗಡಿ ಹಾಗೂ ಕೆಮ್ಮು ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿತ್ತು. ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ನೇತೃತ್ವದಲ್ಲಿ ತಜ್ಞರ ತಂಡ ಚಿಕಿತ್ಸೆ ನೀಡಿತ್ತು. ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದ ಅವರು ಏಳು ದಿನಗಳಲ್ಲೇ ಚೇತರಿಸಿಕೊಂಡು ಮನೆಗೆ ತೆರಳಿದ್ದರು.
ಗುಣಮುಖರಾದ ಒಂದೇ ದಿನದಲ್ಲಿ (ಮೇ 14ರಂದು) ಮತ್ತೆ ಆಸ್ಪತ್ರೆಗೆ ದೊರೆಸ್ವಾಮಿ ದಾಖಲಾದರು. ಆದರೆ, ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೃತರ ಅಂತ್ಯಕ್ರಿಯೆಯನ್ನು ನಗರದ ಚಾಮರಾಜಪೇಟೆಯ ಟಿಆರ್ ಮಿಲ್ ರುಧ್ರಭೂಮಿಯಲ್ಲಿ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.
ಎಚ್.ಎಸ್.ದೊರೆಸ್ವಾಮಿ ಅವರ ಪೂರ್ಣ ಹೆಸರು ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಇಳಿವಯಸ್ಸಿನಲ್ಲಿಯೂ ಹೋರಾಟದ ಮೂಲಕ ಹಲವು ಯುವಪೀಳಿಗೆಗಳಿಗೆ ಸ್ಫೂರ್ತಿಯಾಗಿದ್ದರು ದೊರೆಸ್ವಾಮಿ.
ಕನ್ನಡದ ಹಿರಿಯ ನಟ ಕೃಷ್ಣೇಗೌಡ ವಿಧಿವಶ, ತಿಂಗಳ ಹಿಂದೆಯೇ ಕರೊನಾಗೆ ಮಗ ಬಲಿಯಾದರೂ ತಂದೆಗೆ ತಿಳಿಯಲೇ ಇಲ್ಲ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಒಂದೇ ಕುಟುಂಬದ ಮೂವರು ಸಹೋದರರ ಸಾವು!

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 4 =
Remember me
