ಕೋಲಾರ:ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಕೋಲಾರದ ಸೈಬರ್ ಕ್ರೈಂ ಇನ್​ಸ್ಪೆಕ್ಟರ್, ಕೆಎಎಸ್​ ಅಧಿಕಾರಿ, ಉಪನ್ಯಾಸಕ ಸೇರಿ ಹಲವರನ್ನು ಬಂಧಿಸಿದ್ದಾರೆ.
ಕೋಲಾರದ ಸೈಬರ್ ಕ್ರೈಂ ಇನ್​ಸ್ಪೆಕ್ಟರ್ ಆಗಿರುವ ಆಂಜಿನಪ್ಪ, 3 ದಿನ ರಜೆ ಮೇರೆಗೆ ರಾಜಸ್ತಾನಕ್ಕೆ ತೆರಳಿದ್ದರು. ಜೈಪುರದ ಸಾಯಿಪುರ ಬಾಗ್ ಹೋಟೆಲ್​ ಜೂಜಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜೈಸಿಂಗೇಪುರ ಖೋರ್ ಠಾಣೆಯ ಪೊಲೀಸರು ದಾಳಿ ಮಾಡಿ 84 ಮಂದಿಯನ್ನು ಭಾನುವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 9 ಹುಕ್ಕಾ, 14 ಐಷಾರಾಮಿ ಕಾರು, 1 ಟ್ರಕ್, 23 ಲಕ್ಷಕ್ಕೂ ಅಧಿಕ ಹಣ ಜಪ್ತಿ ಮಾಡಿದ್ದಾರೆ.
ಬಂಧಿತರ ಪೈಕಿ ಕೋಲಾರದ ಇನ್​ಸ್ಪೆಕ್ಟರ್​ ಆಂಜಿನಪ್ಪ, ತಹಸೀಲ್ದಾರ್​ ಮಂಜುನಾಥ್, ಉಪನ್ಯಾಸಕ ರಮೇಶ್, ಆರ್​ಟಿಒ ಸಿಬ್ಬಂದಿ ಶಬರೀಶ್, ನಗರಸಭೆ ನಾಮನಿರ್ದೇಶಿತ ಸದಸ್ಯ ಸತೀಶ್, ಟೊಮ್ಯಾಟೊ ವ್ಯಾಪಾರಿ ಸುಧಾಕರ್ ಇದ್ದಾರೆ. ಕರ್ನಾಟಕ ಮಾತ್ರವಲ್ಲ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಬೇರೆ ಬೇರೆ ರಾಜ್ಯಗಳ ಅಧಿಕಾರಿಗಳೂ ಸಿಕ್ಕಿಬಿದ್ದಿದ್ದಾರೆ.
ಅಜ್ಜನಿಂದಲೇ ಮೊಮ್ಮಗನ ಕಿಡ್ನ್ಯಾಪ್! ಉತ್ತರ ಕನ್ನಡದಲ್ಲಿ ವಿಚಿತ್ರ ಪ್ರಕರಣ ಬೇಧಿಸಿದ ಪೊಲೀಸರು

ಬೆಳಗಾವಿಯಲ್ಲಿ ಆಪರೇಷನ್ ಚಿರತೆ ಮತ್ತೆ ವಿಫಲ: ಕಣ್ಣೆದುರೇ ಹೋದರೂ ಬಲೆಗೆ ಬೀಳದ ಚಿರತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + seven =
Remember me
