ಬೆಂಗಳೂರು:ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ? ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದ ಮಗಳ ಪ್ರಾಣವನ್ನೂ ಏಕೆ ತೆಗೆದೆ?… ಈ ಸ್ಟೋರಿ ಓದಿದ್ರೆ ಇಂತಹ ಪ್ರಶ್ನೆಗಳು ಮನದಲ್ಲೇ ಮೂಡುತ್ತಾ ವಿಧಿಯನ್ನೊಮ್ಮೆ ಶಪಿಸದೆ ಇರಲಾರಿರಿ.
ಕುಮಾರಸ್ವಾಮಿ ಲೇಔಟ್​ನಲ್ಲಿ 46 ವರ್ಷದ ಮಹಿಳೆಯೊಬ್ಬರು ಅಪ್ಪನ ತಿಥಿ ಕಾರ್ಯ ಮಾಡುವಾಗ ದುರಂತ ಅಂತ್ಯಕಂಡಿದ್ದಾರೆ. ಕುಮಾರಸ್ವಾಮಿ ಲೇಔಟ್​ನ 2ನೇ ಹಂತದ ನಿವಾಸಿ ಪರಮೇಶ್ವರಿ (46) ಮೃತಪಟ್ಟವರು. 6 ಮಂದಿ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಲೇಔಟ್​ನಲ್ಲಿ ಪರಮೇಶ್ವರಿ ವಾಸಿಸುತ್ತಿದ್ದು, ಸಣ್ಣ-ಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪರಮೇಶ್ವರಿ ತಂದೆ ಈ ಹಿಂದೆ ಮೃತಪಟ್ಟಿದ್ದು, ಬುಧವಾರ ಅವರ ತಿಥಿ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಸಂಬಂಧಿಕರು ಭಾಗಿಯಾಗಿದ್ದರು. ಅಡುಗೆ ಮಾಡಲು ಬಳಸಿದ್ದ ಗ್ಯಾಸ್​ ಸಿಲಿಂಡರ್​ನಿಂದ ಅನಿಲ ಸೋರಿಕೆಯಾಗಿದೆ. ತಂದೆಯನ್ನು ಕಳೆದುಕೊಂಡ ನೋವಿನಲ್ಲೇ ಇದ್ದ ಪರಮೇಶ್ವರಿ, ಅನಿಲ ಸೋರಿಕೆಯಾಗಿರುವುದರ ಪರಿವೇ ಇಲ್ಲದೆ ಗ್ಯಾಸ್​ ಆನ್​ ಮಾಡಿದ್ದರು. ಆ ವೇಳೆ ಏಕಾಏಕಿ ಬೆಂಕಿಯ ಜ್ವಾಲೆ ಪರಮೇಶ್ವರಿ ಹಾಗೂ ಇತರ 6 ಮಂದಿಯ ಮೈಗೆ ತಗುಲಿ ಗಾಯಗೊಂಡಿದ್ದರು. ಚೀರಾಟ ಕೇಳಿ ಸ್ಥಳಕ್ಕೆ ಬಂದ ನೆರೆ-ಹೊರೆಯವರು 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಪರಮೇಶ್ವರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಳಿದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ, ದುರ್ಘಟನೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪರಿಶೀಲಿಸಿ ತೆರಳಿದ್ದಾರೆ. ಕೇವಲ ಬೆಂಕಿಯ ಜ್ವಾಲೆ ಮಾತ್ರ ಕಾಣಿಸಿಕೊಂಡ ಪರಿಣಾಮ ಮನೆಯಲ್ಲಿರುವ ವಸ್ತುಗಳಿಗೆ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಕುಮಾರಸ್ವಾಮಿ ಲೇಔಟ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ಡ್ರೋನ್​ ಸರ್ವೇ ಎಲ್ಲ ಜಿಲ್ಲೆಗೂ ವಿಸ್ತರಣೆ: 2-3ನೇ ಹಂತದಲ್ಲಿ 26 ಜಿಲ್ಲೆಗಳ ಸಮೀಕ್ಷೆ

ನೀನೊಳ್ಳೆ ಜಮೀರ್​ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್​ವೈ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − 11 =
Remember me
