ತುಮಕೂರು:ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಬದುಕಿದ್ದರೂ ಅವರ ಫೋಟೋ ಸಹಿತ ತಿಥಿ ಕಾರ್ಡ್​ ತಯಾರಿಸಿ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿ ವಿಕೃತಿ ಮೆರೆಯಲಾಗಿದೆ.
ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಶ್ರೀನಿವಾಸ್​ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಎಚ್​ಡಿಕೆ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್​, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ ಬಂದು ಸ್ಪಧಿಸಿ ಗೆಲ್ಲಲಿ. ಅವನು ಗೆದ್ದರೆ ನನ್ನ ಜೀವನ ಪೂರ ಆತನ ಮನೆಯಲ್ಲೇ ಕೂಲಿ ಕೆಲಸ ಮಾಡುವೆ ಎಂದು ಓಪನ್​ ಚಾಲೆಂಜ್​ ಮಾಡಿದ್ದರು. ಅಷ್ಟೇ ಅಲ್ಲ, ಇಂದು ತುಮಕೂರಲ್ಲಿ ಶ್ರೀನಿವಾಸ್​ರ ಮನೆ ಮುಂದೆ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್​ ಪರ ಇವರ ಅಭಿಮಾನಿಗಳೂ ಪ್ರತಿಭಟನೆ ನಡೆಸಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಶ್ರೀನಿವಾಸ್​ ಹೆಸರಲ್ಲಿ ತಿಥಿ ಕಾರ್ಡ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಫೇಸ್​ಬುಕ್​ನಲ್ಲಿ ಪ್ರಚಂಡ ಭೈರವ ಹೆಸರಿನ ಖಾತೆಯಿಂದ ತಿಥಿ ಕಾರ್ಡ್​ ಅಪ್​ಲೋಡ್​ ಆಗಿದ್ದು, ಹಲವರಿಗೆ ಟ್ಯಾಗ್​ ಮಾಡಲಾಗಿದೆ. ಈ ಕಾರ್ಡ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೂನ್​ 10ರಂದು ನಿಧನರಾಗಿದ್ದಾರೆ, ಜೂನ್​ 21ರಂದು ಸ್ವಕ್ಷೇತ್ರ ಗುಬ್ಬಿಯಲ್ಲಿ ಕೈಲಾಸ ಸಮಾರಾಧಾನೆ ನಡೆಯಲಿದೆ ಎಂದು ಬರೆಯಲಾಗಿದೆ. ಶ್ರೀನಿವಾಸ್​ರ ಅಭಿಮಾನಿಗಳು ಇದನ್ನು ನೋಡಿ ವಿಕೃತಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಕುಮಾರಸ್ವಾಮಿಗೆ ತಾಕತ್ತಿದ್ದರೆ ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಲಿ: ಚಾಲೆಂಜ್​ ಮಾಡುತ್ತಲೇ ನಾಲಗೆ ಹರಿಬಿಟ್ಟ ಗುಬ್ಬಿ ವಾಸು

ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್​ ದೇವ್​… ತಾಯಿ ರೇವತಿ ಸೆಲೆಕ್ಟ್​ ಮಾಡಿದ ಈ ಹೆಸರಿನ ಅರ್ಥ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
