ಬಳ್ಳಾರಿ:ಅನ್ಯಜಾತಿಯ ಯುವಕನೊಂದಿಗೆ ಪ್ರೀತಿ ಮಾಡಿದ ಯುವತಿಯನ್ನ ಆಕೆಯ ಕುಟುಂಬಸ್ಥರು ರಾತ್ರೋರಾತ್ರಿ ಕೊಲೆಗೈದು ಸುಟ್ಟುಹಾಕಿದ್ದಾರೆ ಎಂಬ ಆಘಾತಕಾರಿ ಪ್ರಕರಣ ನೂತನ ಜಿಲ್ಲೆ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ.
ಹರಪನಹಳ್ಳಿ ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ 18 ವರ್ಷದ ಯುವತಿ ಮತ್ತು ಆಕೆಯ ಮನೆ ಮುಂದಿನ ಮನೆಯ ಯುವಕ ಇಬ್ಬರೂ ಮೂರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಯುವತಿಯ ಮನೆಯವರ ವಿರೋಧ ವ್ಯಕ್ತವಾಗಿದ್ದರಿಂದೆ ಈ ಹಿಂದೆ ವಿಷ ಕುಡಿದಿದ್ದಳಂತೆ. ಪ್ರಥಮ ಪಿಯುಸಿ ಓದುತ್ತಿದ್ದ ಈಕೆ ಮೂರು ದಿನದ ಹಿಂದೆ ಪ್ರಿಯಕರನೊಂದಿಗೆ ಮನೆ ಬಿಟ್ಟು ಓಡಿ ಹೋಗಿದ್ದಳು. ಮದುವೆ ಮಾಡಿಕೊಳ್ಳವ ಆಸೆಯಲ್ಲಿ ಇಬ್ಬರೂ ಪಕ್ಕದ ಗ್ರಾಮದಲ್ಲಿ ತಂಗಿದ್ದರು.ಇದನ್ನೂ ಓದಿರಿಹೆಲ್ಮೆಟ್ ಧರಿಸದ ಬೈಕ್​ ಸವಾರನಿಗೆ ದಂಡ ಹಾಕಿದ ಎಸ್​ಐಗೆ ನಡುರಸ್ತೆಯಲ್ಲೇ ಎಸಿ, ತಹಸೀಲ್ದಾರ್ ಅವಾಜ್​! ವಿಡಿಯೋ ವೈರಲ್​
ಈ ವಿಷಯ ತಿಳಿದು ಅಲ್ಲಿಗೆ ಹೋಗಿದ್ದ ಯುವತಿ ಕಡೆಯವರು ಪ್ರೇಮಿಗಳಿಬ್ಬರನ್ನೂ ಗ್ರಾಮಕ್ಕೆ ಕರೆತಂದಿದ್ದರು. ಪ್ರಾಣ ಭಯದಿಂದ ಪ್ರಿಯಕರ ಊರುಬಿಟ್ಟಿದ್ದಾನೆ. ಇತ್ತ ಯುವತಿ ಯಾವುದೇ ಕಾರಣಕ್ಕೂ ಪ್ರಿಯಕರನನ್ನು ಬಿಟ್ಟು ಬದುಕುವುದಿಲ್ಲ ಎಂದು ಪಟ್ಟು ಹಿದಿಡಿದ್ದಳು. ಆದರೀಗ ಆಕೆ ಬದುಕಿಲ್ಲ.
ಯುವತಿ ಕಡೆಯವರು ನಿನ್ನೆ(ಮಂಗಳವಾರ) ರಾತ್ರಿ 10.30ರ ವೇಳೆಗೆ ಆಕೆಗೆ ಬಲವಂತವಾಗಿ ವಿಷವುಣಿಸಿ ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಗ್ರಾಮದ ಹೊರಕ್ಕೆ ಕರೆದೊಯ್ದು ಅಲ್ಲಿಯೇ ಕೊಲೆ ಮಾಡಿ ರಾತ್ರೋರಾತ್ರಿ ಸುಟ್ಟು ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಡೀ ಘಟನೆಯನ್ನ ಅವಲೋಕಿಸಿದರೆ ಇದು ಮರ್ಯಾದಾ ಹತ್ಯೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಅತ್ತ ಈ ಪ್ರಕರಣವನ್ನು ಮುಚ್ಚಿ ಹಾಕಿಸುವ ಪ್ರಯತ್ನವೂ ನಡೆಯುತ್ತಿದೆ.
ಯುವತಿ ವಿಷ ಸೇವಿಸಿ ಸತ್ತಿದ್ದಾಳೆ. ಪಿಎಂ ಮಾಡದೆ ಕುಟುಂಬಸ್ಥರು ಬಾಲಕಿ ದೇಹವನ್ನ ಸುಟ್ಟಿದ್ದಾರೆ. ಈಗಾಗಲೇ ಬೇರೊಬ್ಬ ಹುಡುಗನೊಂದಿಗೆ ಎಂಗೇಜ್​ಮೆಂಟ್ ಕೂಡ ಆಕೆಗೆ ಆಗಿತ್ತು. ಅಷ್ಟರೊಳಗೆ ಈ ಯುವತಿ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು. ಅವರಿಬ್ಬರನ್ನೂ ಕರೆತಂದು ಬುದ್ಧಿ ಹೇಳಿ ಅವರವರ ಮನೆಗೆ ಗ್ರಾಮಸ್ಥರು ಕಳಿಸಿಕೊಟ್ಟಿದ್ದರು. ಅಷ್ಟರಲ್ಲೇ ಈ ಘಟನೆ ನಡೆದು ಹೋಗಿಬಿಟ್ಟಿದೆ ಎಂದು ಹರಪನಹಳ್ಳಿ ಡಿವೈಎಸ್ಪಿ ಹಾಲಮೂರ್ತಿ ರಾವ್ ತಿಳಿಸಿದ್ದಾರೆ.
ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಅಪ್ಪ-ಅಮ್ಮ ಕೋವಿಡ್​ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + twenty =
Remember me
