ಹಾಸನ:ಕರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ದಿನನಿತ್ಯ ಅಗತ್ಯ ವಸ್ತು ಖರೀದಿಸಲು ಜನರಿಗೆ ಸರ್ಕಾರ ಅವಕಾಶ ಕೊಟ್ಟಿದೆ. ಆದರೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಲೇ ಇದೆ. ಕರೊನಾ ಚೈನ್​ ಲಿಂಕ್​ ಕತ್ತರಿಸಲು ಸಂಪೂರ್ಣ ಲಾಕ್​ಡೌನ್​ ಒಂದೇ ಪರಿಹಾರ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನರಿತ ಹಾಸನ ಜಿಲ್ಲೆಯ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​ಡೌನ್​ ಮಾಡಲು ನಿರ್ಧರಿಸಿದ್ದಾರೆ. ವಾರದಲ್ಲಿ ನಾಲ್ಕು ದಿನ ಜಿಲ್ಲೆ ಸಂಪೂರ್ಣ ಲಾಕ್ ಆಗಲಿದೆ. ಇನ್ನುಳಿದ ಮೂರು ದಿನ ಅಂದರೆ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಮಾತ್ರ ಬೆಳಗ್ಗೆ 6ರಿಂದ 10ಗಂಟೆವರೆಗೆ ಜನರು ಮನೆಯಿಂದ ಹೊರಬಂದು ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಈ 3 ದಿನ ಮಾತ್ರವೇ ಬಾರ್​ಗಳು ನಿಗದಿತ ಸಮಯದಲ್ಲಿ ಬಾಗಿಲು ತೆರೆಯಲಿವೆ. 10 ಗಂಟೆ ಬಳಿಕ ಸಂಪೂರ್ಣ ಲಾಕ್​ ಆಗಲಿದೆ. ಹಾಲಿನ ಡೇರಿ, ಆಸ್ಪತ್ರೆ, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್​ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಗ್ಗಟ್ಟುಗಳು ಬಂದ್​ ಆಗಲಿವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಘೋಷಿಸಿದ್ದಾರೆ.
ಹಾಸನಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತ, ಡಿಎಚ್​ಒ ಮತ್ತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಚಿವ ಕೆ.ಗೋಪಾಲಯ್ಯ ಸಭೆ ನಡೆಸಿದರು. ಈ ವೇಳೆ ವಾರಕ್ಕೆ ಮೂರು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡ. ಉಳಿದಂತೆ ಕಂಪ್ಲೀಟ್​ ಲಾಕ್​ಡೌನ್​ ಮಾಡಿ ಎಂದು ಸಕಲೇಶಪುರ ಶಾಸಕ ಎಚ್​.ಕೆ. ಕುಮಾರಸ್ವಾಮಿ ಒತ್ತಾಯಿಸಿದರು. ಇದಕ್ಕೆ ಜಿಲ್ಲೆಯ ಇತರ ಶಾಸಕರೂ ಸಮ್ಮತಿಸಿದರು.
8 ಸಿಂಹಗಳಿಗೆ ಕರೊನಾ ಪಾಸಿಟಿವ್​, ಜೀವಿ ಸಂಕುಲ ತಲ್ಲಣ: ಪ್ರಾಣಿಗಳಲ್ಲಿ ಕಂಡು ಬಂದ ರೋಗ ಲಕ್ಷಣ ಹೀಗಿದೆ…

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + nine =
Remember me
