ರಾಮನಗರ:ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಹಾಗೂ ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಇಂದು(ಸೆ.28) ಆದೇಶ ಹೊರಡಿಸಿದೆ. ಈ ಕುರಿತು ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಮಾಜಘಾತುಕ ಶಕ್ತಿಗಳನ್ನ ನಿಯಂತ್ರಿಸುವುದು ಸರ್ಕಾರದ ಕರ್ತವ್ಯ. ಆದರೆ, ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ‌ ಎಂಬುದನ್ನ ಜನರ ಮುಂದೆ ತೆರೆದಿಡಬೇಕು. ಇದು ಸರ್ಕಾರದ ಕರ್ತವ್ಯ ಎಂದರು.
ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದತೆ ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು. ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದ್ರೆ ಕಠಿಣ ಕ್ರಮ ಆಗಬೇಕು. ಸಮಾಜಘಾತುಕ ಶಕ್ತಿಗಳನ್ನ ಕಂಟ್ರೋಲ್​ನಲ್ಲಿಡುವುದು ಸರ್ಕಾರದ ಕರ್ತವ್ಯ ಎಂದ ಎಚ್​ಡಿಕೆ, ಎನ್ಐಎ ದಾಳಿಯ ಸತ್ಯಾಂಶಗಳನ್ನು ಜನರ ಮುಂದೆ ಇಡಬೇಕು ಎಂದು ಆಗ್ರಹಿಸಿದರು.
ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ‌ ಎಂಬುದನ್ನ ಜನರಿಗೆ ಮಾಹಿತಿ ನೀಡಿ. ಯಾವ ರೀತಿ ಗಲಭೆ ಸೃಷ್ಟಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂಬುದೂ ಗೊತ್ತಾಗಬೇಕು ಎಂದು ಎಚ್​ಡಿಕೆ ಹೇಳಿದರು.
ಚನ್ನಪಟ್ಟಣದಲ್ಲಿ ಅಪರೂಪದ ಅಟ್ಲಾಸ್​ ಪ್ರಭೇದದ ಪತಂಗ ಪತ್ತೆ: 10-15 ದಿನ ಬದುಕುವ ಜೀವಿಗೆ ಹಾವಿನ ರೂಪದ ರೆಕ್ಕೆಗಳೇ ಆಕರ್ಷಣೆ

ಪರಸ್ಪರ ಮದ್ವೆಯಾಗಲು ನಿರ್ಧರಿಸಿದ್ದ ಬೆಂಗಳೂರಿನ ಶಾಲಾ ಬಾಲಕಿಯರು… ಇವರ ಕರುಣಾಜನಕ ಕಥೆ ಕೇಳಿದ್ರೆ ಕರುಳುಹಿಂಡುತ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 7 =
Remember me
